ಪತ್ನಿ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿ, ಆಸ್ಪತ್ರೆಗೆ ಕರೆದುಕೊಂಡು ಬಂದು ದಾಖಲು! | Janata news
ಹುಬ್ಬಳ್ಳಿ : ಪತಿಯೊಬ್ಬ ಪತ್ನಿ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿ ತಾನೇ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದು ದಾಖಲು ಮಾಡಿದ ಘಟನೆ ನಡೆದಿದೆ.
ಪವಿತ್ರಾ ಮಾದರ ಹಲ್ಲೆಗೊಳಗಾದ ಮಹಿಳೆ. ಪತಿ ಈರಪ್ಪ ಈಕೆ ಮೇಲೆ ಹಲ್ಲೆ ಮಾಡಿದ್ದಾನೆ. ದಂಪತಿ ಸುಳ್ಳ ಗ್ರಾಮದ ನಿವಾಸಿಗಳಾಗಿದ್ದಾರೆ.
ಸುಳ್ಳ ಗ್ರಾಮದ ಪವಿತ್ರಾ ಮಾದರ ಹಾಗೂ ಆಕೆಯ ಪತಿ ಈರಪ್ಪ ನಡುವೆ ಕಳೆದ ಮೂರು ದಿನಗಳಿಂದ ನಿರಂತರ ಜಗಳ ನಡೆಯುತ್ತಿತ್ತು. ಈ ಜಗಳ ಅತಿರೇಕಕ್ಕೆ ಹೋದ ಕಾರಣ, ಪತ್ನಿ ಮನೆ ಕೆಲಸ ಮಾಡುತ್ತಿದ್ದ ವೇಳೆ ಪತಿ ಈರಪ್ಪ ಕೊಡಲಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.
ಪವಿತ್ರಾ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಒದ್ದಾಡತೊಡಗಿದಾಗ ತಾನೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಿದ್ದಾನೆ. ಸದ್ಯ ಮಹಿಳೆಯ ಸ್ಥಿತಿ ಗಂಭೀರವಾಗಿದೆ.
ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈರಪ್ಪನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.