ಸಂಸದ ಅನಂತ್ಕುಮಾರ್ ಹೆಗಡೆಗೆ ಶಸ್ತ್ರ ಚಿಕಿತ್ಸೆ: ವೈದ್ಯರಿಂದ ಬೆಡ್ ರೆಸ್ಟ್ಗೆ ಸಲಹೆ | Janata news
ಶಿರಸಿ: : ಹಲವು ವರ್ಷಗಳಿಂದ ತೀವ್ರವಾದ ಬೆನ್ನು ನೋವು ಮತ್ತು ಕಾಲು ನೋವಿನಿಂದ ಬಳಲುತ್ತಿರುವ ಸಂಸದರು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.
ಅನಂತಕುಮಾರ ಹೆಗಡೆ ಕಳೆದ ಹಲವು ವರ್ಷಗಳಿಂದ ಬೆನ್ನು ನೋವು ಮತ್ತು ಕಾಲು ನೋವಿನಿಂದ ಬಳಲುತ್ತಿದ್ದು, ಇದೇ ಕಾರಣದಿಂದಾಗಿ ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಜಕೀಯ ನಿವೃತ್ತಿ ಬಗ್ಗೆ ತಮ್ಮ ನಿರ್ಧಾರ ವ್ಯಕ್ತಪಡಿಸಿದ್ದರು.
ಇದಕ್ಕೆ ಅವರ ಖಾಸಗಿ ಕಾರ್ಯದರ್ಶಿ ಉತ್ತರ ನೀಡಿದ್ದು ಅನಂತ ಕುಮಾರ್ ಹೆಗಡೆಯವರು ರಾಜಕೀಯಕ್ಕೆ ನಿವೃತ್ತಿ ಹೇಳುವುದಿಲ್ಲ, ಅವರ ಮಂಡಿ ಸರ್ಜರಿಯಾಗಿದ್ದು ವೈದ್ಯರು ಸಂಪೂರ್ಣ ವಿಶ್ರಾಂತಿ ಘೋಷಿಸಿದ್ದಾರೆ ಎಂದರು.
ಕಳೆದ ಕೆಲವು ತಿಂಗಳಿಂದ ಬೆನ್ನು ನೋವು ಮತ್ತು ಕಾಲು ನೋವು ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ತಜ್ಞ ವೈದ್ಯರ ಸಲಹೆಯಂತೆ ಸಂಸದರು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಸದ್ಯ ಶಸ್ತ್ರ ಚಿಕಿತ್ಸೆ ನಂತರ ನಿಧಾನವಾಗಿ ಚೇತರಿಸಿಕೊಳ್ಳುತ್ತಿರುವ ಅನಂತ್ಕುಮಾರ್ ಹೆಗಡೆ ಅವರಿಗೆ ವೈದ್ಯರು ದೀರ್ಘಾವಧಿಯ ವಿಶ್ರಾಂತಿ ಪಡೆಯಲು ಸೂಚನೆ ನೀಡಿದ್ದಾರಂತೆ.
ಲೋಕಸಭಾ ಚುನಾವಣೆಯ ನಂತರದಿಂದ ಹೆಚ್ಚಿನ ಸಾರ್ವಜನಿಕ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕ ಸಂಪರ್ಕದಿಂದ ದೂರವಿರುತ್ತಿದ್ದರು ಎಂದು ಕೂಡ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.