ಡಿ.ಕೆ.ರವಿ ತಂದೆ ಕರಿಯಪ್ಪ ವಿಧಿವಶ! | Janata news
ತುಮಕೂರು : ದಿವಂಗತ ಡಿ.ಕೆ.ರವಿ ತಂದೆ ಕರಿಯಪ್ಪ (71) ಹೃದಯಾಘಾತದಿಂದ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ.
ರಕ್ತದೊತ್ತಡ ಕಡಿಮೆಯಾಗಿ ಕರಿಯಪ್ಪ ಕುಸಿದು ಬಿದ್ದಿದ್ದರು. ಜಿಲ್ಲೆಯ ಕುಣಿಗಲ್ ತಾಲೂಕಿನ ದೊಡ್ಡಕೊಪ್ಪಲು ಗ್ರಾಮದ ಮನೆಯಲ್ಲಿ ಕುಸಿದು ಬಿದ್ದಿದ್ದರು.
ಈ ವೇಳೆ, ಕರಿಯಪ್ಪ ಅವರನ್ನು ಹುಲಿಯೂರುದುರ್ಗದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಕುಣಿಗಲ್ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ತಾಲೂಕು ಆಸ್ಪತ್ರೆಯಲ್ಲಿ ಕರಿಯಪ್ಪ ನಿಧನರಾಗಿದ್ದಾರೆ.
ಮೃತರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಮಂಗಳವಾರ ಸ್ವಗ್ರಾಮ ದೊಡ್ಡಕೊಪ್ಪಲು ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
RELATED TOPICS:
English summary :Tumkur