ಉಗ್ರರೊಂದಿಗೆ ಯುವಕರಿಬ್ಬರ ಸಂಪರ್ಕ ಆರೋಪ : ಎನ್ ಐಎ ಅಧಿಕಾರಿಗಳ ಭೇಟಿ | Janata news
ಶಿವಮೊಗ್ಗ : ತೀರ್ಥಹಳ್ಳಿಯ ಇಬ್ಬರು ಯುವಕರು ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ತೀರ್ಥಹಳ್ಳಿಯ ಮನೆಯೊಂದಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವುದಾಗಿ ತಿಳಿದು ಬಂದಿದೆ.
ಸ್ಯಾಟಲೈಟ್ ಫೋನ್ ಬಳಕೆಯ ಹಿನ್ನೆಲೆಯಲ್ಲಿ ಕಳೆದ ವರ್ಷ ಮಾರ್ಚ್ನಲ್ಲಿ ತೀರ್ಥಹಳ್ಳಿ ತಾಲೂಕಿನಾದ್ಯಂತ ಎನ್ಐಎ ಕೂಬಿಂಗ್ ನಡೆಸಿತ್ತು. ಈ ವೇಳೆ ತೀರ್ಥಹಳ್ಳಿಯ ಯುವಕರಿಬ್ಬರು ಉಗ್ರರೊಂದಿಗೆ ಸಂಪರ್ಕ ಹೊಂದಿರುವುದು ದೃಢಪಟ್ಟಿತ್ತು. ಅಷ್ಟರಲ್ಲಿ ಯುವಕರು ನಾಪತ್ತೆಯಾಗಿದ್ದರು.
ಹೆಚ್ಚಿನ ತನಿಖೆಗಾಗಿ ಮತ್ತೆ ಯುವಕರ ಮನೆಗೆ ಭೇಟಿ ನೀಡಿರುವ ಎನ್ಐಎ ಅಧಿಕಾರಿಗಳ ತಂಡ, ತಲೆಮರೆಸಿಕೊಂಡಿರುವ ಯುವಕರು ಕುಟುಂಬದೊಂದಿಗೆ ಸಂಪರ್ಕ ಸಾಧಿಸಿದ್ದಾರೆಯೇ ಎಂದು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.
RELATED TOPICS:
English summary :Shivamogga