ಸಿಡಿ ಪ್ರಕರಣ: ಅಧಿಕೃತ ದೂರು ನೀಡಿದ ರಮೇಶ್ ಜಾರಕಿಹೊಳಿ | Janata news
ಬೆಂಗಳೂರು : ಸಿಡಿ ಪ್ರಕರಣದ ಕುರಿತು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಧಿಕೃತವಾಗಿ ಇಂದು ದೂರು ದಾಖಲಿಸಿದ್ದಾರೆ.
ಪ್ರಕರಣ ಕುರಿತು ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆ ಆರಂಭಿಸಿದೆ. ತನಿಖಾ ತಂಡಕ್ಕೆ ಸಹಕಾರ ನೀಡುವ ಉದ್ದೇಶದಿಂದಾಗಿ ರಮೇಶ್ ಜಾರಕಿಹೊಳಿ ಇಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸ್ವತಃ ರಮೇಶ್ ಜಾರಕಿಹೊಳೆಯವ್ರೇ ಲಿಖಿತ ರೂಪದಲ್ಲಿ ಈ ದೂರನ್ನ ನೀಡಿದ್ದು, ಆಪ್ತ ಎಂ.ವಿ ನಾಗಾರಾಜ್ ಅವರ ಕೈಯಲ್ಲಿ ಠಾಣೆಗೆ ಕೊಟ್ಟು ಕಳಿಸಿದ್ದಾರೆ. ಅವರು ರಮೇಶ್ ಜಾರಕಿಹೊಳಿಯವರ ದೂರನ್ನು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.
ಬೆಂಬಲಿಗರ ಮೂಲಕ ರಮೇಶ್ ಜಾರಕಿಹೊಳಿ ದೂರು ದಾಖಲಿಸಿದ್ದು, ದೂರಿನಲ್ಲಿ ಯಾರ ಹೆಸರನ್ನೂ ಉಲ್ಲೇಖಿಸಿಲ್ಲ. ಈ ಸಿಡಿಯಿಂದ ತನ್ನ ತೇಜೋವಧೆ ಆಗಿದೆ. ನನ್ನನ್ನ ಬ್ಲ್ಯಾಕ್ ಮೇಲ್ ಮಾಡಲಾಗಿದ್ದು, ತನಿಖೆ ಮಾಡಿ ಎಂದು ದೂರಿನಲ್ಲಿ ತಿಳಿಸಿದ್ದಾರೆ.