ಸಿಡಿ ಪ್ರಕರಣದ ಹಿಂದೆನ ಮಹಾನ್ ನಾಯಕನನ್ನ ನೋಡಲು ಕುತೂಹಲದಿಂದ ಕಾಯುತ್ತಿದ್ದೇನೆ: ಹೆಚ್.ಡಿ.ಕುಮಾರಸ್ವಾಮಿ | Janata news
ರಾಮನಗರ : ಸಿಡಿ ಪ್ರಕರಣದ ಹಿಂದೆ ಯಾವ ಮಹಾನ್ ನಾಯಕರು ಇದ್ದಾರೆ ಎಂದು ತಿಳಿಯಲು ನಾನು ಕುತೂಹಲದಿಂದ ಕಾಯ್ತಿದ್ದೀನಿ ಎಂದು ರಾಮನಗರದಲ್ಲಿ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಹೆಸರನ್ನು ತಾವೇ ಸಿಲುಕಿಸಿಕೊಂಡಿದ್ದೇಕೆ ಎಂದು ಗೊತ್ತಾಗಲಿಲ್ಲ. ಈ ಪ್ರಕರಣದಲ್ಲಿ ಅವರ ಹೆಸರನ್ನು ಯಾರಾದರೂ ಹೇಳಿದ್ದಾರಾ? ಅವರೇಕೆ ಹಾಗೆ ಊಹೆ ಮಾಡಿಕೊಂಡರೋ? ರಾಜ್ಯದಲ್ಲಿ ಮಹಾನಾಯಕರು ಬಹಳ ಜನ ಇದ್ದಾರೆ.. ಎಂದಿರುವ ಹೆಚ್.ಡಿ.ಕುಮಾರಸ್ವಾಮಿ ಮಹಾನಾಯಕನ ಬಗ್ಗೆ ನಾನು ಸಹ ಕುತೂಹಲದಿಂದ ಕಾಯುತ್ತಿದ್ದೇನೆ. ಇದು ಯಾವುದೋ ಧಾರಾವಾಹಿಯಂತೆ ಇದೆ. ಅಂತಿಮವಾಗಿ ಯಾರಿಗೆ ಸುತ್ತಿಕೊಳ್ಳುತ್ತೋ ನೋಡಬೇಕು.
ಇಂತಹ ವೈಯಕ್ತಿಕ ವಿಚಾರಗಳಿಗೆ ನಾವು ತಲೆ ಹಾಕಲ್ಲ. ರಾಜ್ಯದಲ್ಲಿ ಇದಕ್ಕಿಂತ ಜನರ ಸಮಸ್ಯೆಗಳೇ ಹೆಚ್ಚಾಗಿವೆ. ನಾವು ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಗಮನ ನೀಡುತ್ತೇವೆಯೇ ಹೊರತು ಅದು ಬಿಟ್ಟು ವೈಯಕ್ತಿಕ ಲಾಭಕ್ಕಾಗಿ ಸಣ್ಣತನಕ್ಕೆ ಇಳಿಯಲ್ಲ ಎಂದು ಹೇಳಿದ್ದಾರೆ.
ರಾಜಕೀಯವಾಗಿ ನಮ್ಮ ಕುಟುಂಬದಲ್ಲಿ ಇಂತಹ ವಿಷಯಗಳ ಬಗ್ಗೆ ದುರುಪಯೋಗ ಮಾಡಿಕೊಂಡು ರಾಜಕೀಯ ಮಾಡಿಲ್ಲ.ಇದು ಅವರ ವೈಯಕ್ತಿಕ ವಿಚಾರಗಳು, ಜನರ ಸಮಸ್ಯೆಗಳ ಬಗ್ಗೆ ದೊಡ್ಡ ಸಾವಲುಗಳಿದೆ. ಅದರ ಈ ಬಗ್ಗೆ ಗಮನ ಕೊಡಬೇಕು ಹೊರತು ಈ ರೀತಿಯ ಘಟನೆಗಳಿಂದ ನಮಗೆ ವೈಯಕ್ತಿಕ ಲಾಭ ಪಡೆಯಬೇಕು ಎಂಬ ಸಣ್ಣತನಕ್ಕೆ ನಾವು ಇಳಿಯುವುದಿಲ್ಲ ಎಂದು ತಿಳಿಸಿದರು.