ಶಾಸಕರ ಗುರುತಿನ ಚೀಟಿಯಿದ್ದ ಕಾರ್ ಗ್ಲಾಸ್ ಪುಡಿ ಮಾಡಿ 4 ಲಕ್ಷ ಹಣ ಕಳವು! | Janata news
ರಾಯಚೂರು : ಶಾಸಕರ ಗುರುತಿನ ಚೀಟಿ ಅಂಟಿಸಿದ್ದ ಕಾರಿನ ಗ್ಲಾಸ್ ಒಡೆದು ಖದೀಮರು ಹಣ ಕಳ್ಳತನ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಮಲ್ಲಿಕಾರ್ಜುನ ಚಿತ್ರಮಂದಿರ ಬಳಿ ನಡೆದಿದೆ.
ಕೊಪ್ಪಳ ಜಿಲ್ಲೆ ಕನಕಗಿರಿಯ ಬಿಜೆಪಿ ಶಾಸಕ ಬಸವರಾಜ ದಡೇಸೂಗುರು ಅವರ ಗುರುತಿನ ಚೀಟಿ ಇದ್ದ ಕಾರಲ್ಲಿ 4 ಲಕ್ಷ ರೂಪಾಯಿ ನಗದು ಇತ್ತು. ಈ ಬಗ್ಗೆ ಗೊತ್ತಿದ್ದ ದುಷ್ಕರ್ಮಿಗಳು ಕಾರಿನ ಗಾಜು ಹೊಡೆದು ಒಳಗಿದ್ದ ಹಣ ದೋಚಿ ಪರಾರಿಯಾಗಿದ್ದಾರೆ.
ಆದರೆ ಈ ಕಾರು ಶಾಸಕರ ಬೆಂಬಲಿಗ ಡಾಂಬರ್ ಗೋವಿಂದ್ ಎಂಬವರಿಗೆ ಸೇರಿದ್ದಾಗಿದ್ದು, ಶಾಸಕರ ಗುರುತಿನ ಚೀಟಿಯನ್ನು ಅಂಟಿಸಿಕೊಂಡು ಓಡಾಡುತ್ತಿದ್ದನು.
ಸದ್ಯ ಈ ಘಟನೆ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಇದೀಗ ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
English summary :Rayachuru