ಕಾಂಗ್ರೆಸ್ ಮುಖಂಡನನ್ನು ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆ! ಬೆಚ್ಚಿಬಿದ್ದ ಜನ | Janata news
ಚಿಕ್ಕಬಳ್ಳಾಪುರ : ಹಾಡಹಗಲೇ ಮಚ್ಚಿನಿಂದ ಕೊಚ್ಚಿ ಕಾಂಗ್ರೆಸ್ ಮುಖಂಡನನ್ನ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಪಟ್ಟಣದಲ್ಲಿ ನಡೆದಿದೆ.
ರೌಡಿಶೀಟರ್ ಅಮ್ಜದ್(43) ಕೊಲೆಯಾದವ. ಬೈಕ್ನಲ್ಲಿ ಬರುತ್ತಿದ್ದ ಅಮ್ಜದ್ನನ್ನು ಒಮ್ನಿ ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ಅಪರಿಚಿತರು ಶಿಡ್ಲಘಟ್ಟ ನಗರ ಪೊಲೀಸ್ ಠಾಣೆ ಮುಂಭಾಗ ಅಡ್ಡಗಟ್ಟಿ ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಂದು ಪರಾರಿಯಾಗಿದ್ದಾರೆ.
ಹಳೇ ದ್ವೇಷದ ಹಿನ್ನೆಲೆ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸ್ ಠಾಣೆ ಸಮೀಪದಲ್ಲೇ ನಡೆದ ಕೊಲೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.
RELATED TOPICS:
English summary :Chikkaballapura