ತಲೆಯನ್ನು ಕಲ್ಲಿನಿಂದ ಜಜ್ಜಿ ವ್ಯಕ್ತಿ ಕೊಲೆ | Janata news
ಬಳ್ಳಾರಿ : ಯುವಕನನ್ನು ಅಟ್ಟಿಸಿಕೊಂಡು ಕಲ್ಲಿನಿಂದ ಜೆಜ್ಜಿ ಕೊಲೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ.
ನಗರದ ಟಿಬಿ ಡ್ಯಾಂ ರಾಷ್ಟ್ರೀಯ ಹೆದ್ದಾರಿ 50ರ ಕೆಳಗಡೆ ವ್ಯಕ್ತಿವೋರ್ವನ ಕೊಲೆಯಾಗಿದೆ. ಕೊಲೆಗೀಡಾದ ವ್ಯಕ್ತಿಯನ್ನು ಕೇಬಲ ಅಪರೇಟರ್ ಜಾನ್ ಮೈಕಲ್ (40) ಎಂದು ಗುರುತಿಸಲಾಗಿದೆ.
ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಹಳೆಯ ದ್ವೇಷವೇ ಕೊಲೆಗೆ ಕಾರಣ ಎಂದು ಹೇಳಲಾಗುತ್ತಿದೆ. ಜಾನ್ ಅವರ ಕೈಕಟ್ಟಿ, ಕಲ್ಲಿನಿಂದ ತಲೆಗೆ ಬಲವಾಗಿ ಹೊಡೆದು ಕೊಲೆ ಮಾಡಲಾಗಿದೆ.
ಸ್ಥಳಕ್ಕೆ ಟಿಬಿ ಡ್ಯಾಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.
English summary :Ballari