ಆತ್ಮಹತ್ಯೆಗೆ ಯತ್ನ: ಚಿಕಿತ್ಸೆ ಫಲಿಸದೆ ವಿದ್ಯಾರ್ಥಿನಿ ಸಾವು | Janata news
ಬೆಳ್ತಂಗಡಿ : ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬೆಳ್ತಂಗಡಿ ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮಾ.23 ರಂದು ರಾತ್ರಿ ಸಾವನ್ನಪ್ಪಿದ ಘಟನೆ ನಡೆದಿದೆ.
ಗಂಡಿಬಾಗಿಲು ದೇವಗಿರಿ ಚೇನಪಳ್ಳಿ ವಿಜು ಅವರ ಪುತ್ರಿ ವಿನ್ಸಿ(20). ಗಂಡಿಬಾಗಿಲು ದೇವಗಿರಿ ಚೇನಪಳ್ಳಿ ವಿಜು ಅವರ ಪುತ್ರಿಯಾಗಿದ್ದಾಳೆ. ಬೆಳ್ತಂಗಡಿ ನಗರದ ಕಾಲೇಜೊಂದರ ಅಂತಿಮ ಬಿ. ಕಾಂ. ಓದುತಿದ್ದಳು.
ಮಾ.14 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ತಕ್ಷಣ ಅವಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಾ.23 ರಂದು ರಾತ್ರಿ ಸಾವನ್ನಪ್ಪಿದ್ದಾಳೆ.
ಈಕೆಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
RELATED TOPICS:
English summary :Udupi