ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದಲ್ಲಿ ಅದಕ್ಕಾಗಿ ವಿಷಾದಿಸುತ್ತೇನೆ | Janata news
ಬೆಂಗಳೂರು : ಯಾರಿಗಾದರೂ ನನ್ನ ಹೇಳಿಕೆಯಿಂದ ನೋವಾಗಿದ್ದಲ್ಲಿ ಅದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇನೆ. ನಮ್ಮ ಹದಿನೇಳು ಜನರ ವಿರುದ್ದ ತೇಜೋವಧೆ ಯತ್ನ ನಡೆಸಿದ್ದ ಕೆಲ ನಾಯಕರ ವಿರುದ್ಧ ಮಾತ್ರವೇ ನಾನು ಹೇಳಿಕೆ ನೀಡುವ ಯತ್ನ ಮಾಡಿದ್ದೇನೆಯೇ ಹೊರತು ಎಲ್ಲಾ ಶಾಸಕರಿಗೆ ನೋವು ಉಂಟು ಮಾಡುವ ಉದ್ದೇಶ ನನಗಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಕೆಲ ನಾಯಕರ ಏಕಪಕ್ಷೀಯ, ಪೂರ್ವಗ್ರಹ ಪೀಡಿತ ಹೇಳಿಕೆಗಳಿಂದ ಬೇಸತ್ತು ಅವರ ನೈತಿಕತೆ ಪ್ರಶ್ನಿಸಿ ಮಾಧ್ಯಮಗಳಿಗೆ ನೀಡಿದ್ದ ತಮ್ಮ ಹೇಳಿಕೆ ಬೇರೆ ಬೇರೆ ಆಯಾಮ ಪಡೆದುಕೊಂಡಿದೆ. ಎಲ್ಲಾ ಶಾಸಕ ಮಿತ್ರರ ಬಗ್ಗೆ ತಾವು ಅಪಾರ ಗೌರವ ಇರಿಸಿಕೊಂಡಿರುವುದಾಗಿ ಡಾ. ಸುಧಾಕರ್ ಹೇಳಿದ್ದಾರೆ.
ತಮ್ಮ ಹೇಳಿಕೆಯನ್ನು ಅರ್ಥ ಮಾಡಿಕೊಳ್ಳಬೇಕಾದ ಮಹಾನಾಯಕರು ಅರ್ಥ ಮಾಡಿಕೊಂಡರೆ ಸಾಕು . ಇಡೀ ರಾಜ್ಯದ ಜನರನ್ನು ತಪ್ಪು ದಾರಿಗೆ ಎಳೆದು ರಾಜಕೀಯ ದ್ವೇಷ ಸಾಧಿಸಲು ಹೊರಟಿರುವ ಮಹಾನಾಯಕರ ಮುಖವಾಡ ಕಳಚುವ ಉದ್ದೇಶ ತಮ್ಮ ಹೇಳಿಕೆಯ ಹಿಂದೆ ಇತ್ತು ಎಂದು ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಸುಧಾಕರ್, ನಮ್ಮ ತೇಜೋವಧೆ ಮಾಡಲು ಹೊರಟವರ ಉದ್ದೇಶ ಈಡೇರಲ್ಲ ಎಂದು ಹೇಳಿದ್ದಾರೆ.
ನನ್ನ ಹೇಳಿಕೆ ಯನ್ನು ಅರ್ಥ ಮಾಡಿಕೊಳ್ಳಬೇಕಾದ ಮಹಾನಾಯಕರುಗಳು ಅರ್ಥ ಮಾಡಿಕೊಂಡರೆ ಸಾಕು .
— Dr Sudhakar K (@mla_sudhakar) March 24, 2021
ಇಡೀ ರಾಜ್ಯದ ಜನರನ್ನು ತಪ್ಪು ದಾರಿಗೆ ಎಳೆದು ರಾಜಕೀಯ ದ್ವೇಷ ಸಾಧಿಸಲು ಹೊರಟಿರುವ ಮಹಾನಾಯಕರ ಮುಖವಾಡ ಕಳಚುವ ಉದ್ದೇಶ ನನ್ನ ಹೇಳಿಕೆಯ ಹಿಂದೆ ಇತ್ತು ಅಷ್ಟೇ .
ನಮ್ಮಗಳ ತೇಜೋವಧೆ ಮಾಡಲು ಹೊರಟವರ ಉದ್ದೇಶ ಈಡೇರಲ್ಲ . pic.twitter.com/XvWKkWLI89