ಬೈಕ್ ಸವಾರನನ್ನ ಸಾಯಿಸಿದ ಪೊಲೀಸರಿಗೆ ಪ್ರಶಂಸನಾ ಪತ್ರ ಕೊಡ್ತಿಯಾ? ಎಚ್.ವಿಶ್ವನಾಥ್ರಿಂದ ಪೊಲೀಸ್ ಕಮಿಷನರ್ ತರಾಟೆಗೆ | Janata news
ಮೈಸೂರು : ಬೈಕ್ ಸವಾರನನ್ನ ಸಾಯಿಸಿದ ಪೊಲೀಸರಿಗೆ ಪ್ರಶಂಸನಾ ಪತ್ರ ಕೊಡ್ತಿಯಾ?. ನೀನು ಯಾವ್ ಸೀಮೆ ಕಮಿಷನರಯ್ಯ? ಎಂದು ಮೈಸೂರು ಕಮಿನಷರ್ ವಿರುದ್ಧ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಗುಡುಗಿದರು.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೈಕ್ ಸವಾರರ ಸಾವಿಗೆ ಕಾರಣರಾದ ಪೊಲೀಸರಿಗೆ ಪ್ರಶಂಸನಾ ಪತ್ರ ಕೊಡುತ್ತೀಯಾ. ಪೊಲೀಸ್ ಕಮಿಷನರ್ ಬೀದಿಗೆ ಬರಲ್ಲ. ಸಿಟಿ ರೌಂಡ್ ಹಾಕಲ್ಲ, ಎಷ್ಟು ವರ್ಷ ಆಯ್ತು ಬಂದು. ಎಷ್ಟು ಜನ ಡಿಸಿಪಿ, ಎಸಿಪಿಗಳಿದ್ದೀರಿ ಏನ್ ಮಾಡ್ತಿದ್ದೀರಿ ಎಂದು ಪ್ರಶ್ನಿಸಿದರು.
ಎಷ್ಟು ಜನ ಡಿಸಿಪಿ, ಎಸಿಪಿಗಳಿದ್ದೀರಿ. ಎಲ್ಲರೂ ಏನ್ ಮಾಡ್ತಿದ್ದೀರಿ. ಕೇವಲ ಟ್ರಾಫಿಕ್ ಪೊಲೀಸರಿಂದ ಟ್ರಾಫಿಕ್ ಕಂಟ್ರೋಲ್ ಆಗಲ್ಲ. ಜನಪ್ರತಿನಿಧಿಗಳು, ಜನರ ಬಗ್ಗೆ ಗೌರವ ಇಲ್ಲ. ಸದನದಲ್ಲಿ ಚರ್ಚೆಯೂ ಆಗಿಲ್ಲ. ಅಧಿವೇಶನದಲ್ಲಿ ಸಿಡಿ ಹಿಡ್ಕೊಂಡು ವಿಷ್ಣು ಚಕ್ರ ತಿರುಗಿಸಿದ್ದಾರೆ ಅಷ್ಟೇ.. ಮೈಸೂರಿನಲ್ಲಿ ನಡೆದ ನಿನ್ನೆಯ ಘಟನೆ ಖಂಡನೀಯ ಎಂದರು.
ಇದು ಪೊಲೀಸರ ಅಚಾತುರ್ಯದಿಂದ ನಡೆದಿರುವ ಘಟನೆ. ಓಡಾಡಿಸಿಕೊಂಡು ಬೈಕ್ ಹಿಡಿಯಿರಿ ಅಂತ ಕಾನೂನು ಎಲ್ಲಿದೆ? ಫೋಟೋ, ಸಿಸಿ ಕ್ಯಾಮೆರಾ ಇಲ್ವ? ಇವರಿಗೆ ಮಾನ ಮರ್ಯಾದೆ ಇಲ್ಲ, ಗೂಂಡಾಗಿರಿ ಮಾಡ್ತಿದ್ದಾರೆ.
ಕಮಿಷನರ್ ಸುಮ್ಮನೆ ಕೂರುವುದಲ್ಲ, ಹೊರಗೆ ಬರಬೇಕು. ಸಿಟಿ ಪೊಲೀಸ್ ಕಾಯ್ದೆ ಏನ್ ಹೇಳುತ್ತೆ. ಓಡಿಸಿಕೊಂಡು ಬೈಕ್ ಇಡಿ ಅಂತ ಹೇಳುತ್ತಾ. ಸರ್ಕಾರದ ದುಡ್ಡಲ್ಲಿ ಕ್ಯಾಮೆರಾ, ಉಪಕರಣಗಳನ್ನು ಕೊಟ್ಟಿದ್ದೀವಿ. ಈ ವರ್ತನೆಯನ್ನು ಯಾರೂ ಕ್ಷಮಿಸಲ್ಲ ಎಂದು ಕಿಡಿಕಾರಿದರು.
ಈ ಸಂಬಂಧ ನಾನು ಗೃಹ ಸಚಿವರು, ಜಿಲ್ಲಾ ಉಸ್ತುವಾರಿ ಜೊತೆ ಮಾತನಾಡ್ತೀನಿ. ಪೊಲೀಸ್ ವ್ಯವಸ್ಥೆ ಸುಧಾರಣೆಯಾಗಬೇಕಿದೆ ಎಂದು ಹೇಳಿದರು.