ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ:ಬರ್ತ್ ಡೇ ಸಂಭ್ರಮದಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು | Janata news
ಬಾಗಲಕೋಟೆ : ಕಾರು ನಿಂತಿದ್ದ ಲಾರಿಗೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದದ ಬೇವಿನಮಟ್ಟಿ ಕ್ರಾಸ್ ಬಳಿ ನಡೆದಿದೆ.
ಚಂದ್ರಶೇಖರ ಬುಟ್ಟಾ(22), ನವೀನ್ ಸಾಕಾ( 20), ಚೆನ್ನಬಸವ ಅಂಜಿ(22) ಹಾಗೂ ಬಸವರಾಜ ಭಂಡಾರಿ (33) ಮೃತರು. ಇವರೆಲ್ಲರೂ ಇಳಕಲ್ ಮೂಲದವರು ಎಂದು ತಿಳಿದುಬಂದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಚಾಲಕ ವಿಜಯಕುಮಾರ್ ಬಂಡಿ ಗಂಭೀರ ಗಾಯಗೊಂಡಿದ್ದಾನೆ.
ಬರ್ತ್ ಡೇ ಆಚರಣೆಗೆಂದು ಇವರೆಲ್ಲರೂ ಇಳಕಲ್ನಿಂದ ಗುಳೇದಗುಡ್ಡಕ್ಕೆ ಕಾರಿನಲ್ಲಿ ಹೋಗಿದ್ದರು. ಬರ್ತ್ ಡೇ ಸಂಭ್ರಮಾಚರಣೆಯ ಖುಷಿಯಲ್ಲೇ ವಾಪಸ್ ಮನೆಗೆ ಮರಳುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಘಟನೆಯಲ್ಲಿ ಕಾರ್ ಚಾಲಕ ವಿಜಯ್ ಕುಮಾರ್ ಬಂಡಿ ಗಾಯಗೊಂಡಿದ್ದಾರೆ. ಅವರ ಸ್ಥಿತಿ ಗಂಭೀರವಾಗಿದ್ದು, ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹುನಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.