ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ಪತ್ರ ಬರೆದಿದ್ದು ಸರಿಯಲ್ಲ: ಜಗದೀಶ ಶೆಟ್ಟರ್ | ಜನತಾ ನ್ಯೂಸ್
ಬೆಳಗಾವಿ : ಸಚಿವ ಕೆ.ಎಸ್. ಈಶ್ವರಪ್ಪ ಅವರು ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದಿದ್ದು ಸರಿಯಲ್ಲ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ಈಶ್ವರಪ್ಪ ಹಿರಿಯ ಸಚಿವರಿದ್ದಾರೆ. ಅವರು ಅನುದಾನ ಹಂಚಿಕೆ ತಾರತಮ್ಯ ವಿಚಾರದ ಕುರಿತು ಈ ರೀತಿ ಬಹಿರಂಗ ಪತ್ರ ಬರೆಯ ಬಾರದಿತ್ತು ಎಂದು ತಿಳಿಸಿದರು.
ಏನೇ ಸಮಸ್ಯೆ ಇದ್ದರೂ ರಾಜ್ಯದ ಮುಖ್ಯಮಂತ್ರಿಗಳಿದ್ದಾರೆ. ಅವರ ನಾಯಕತ್ವದಲ್ಲೇ ನಾವೆಲ್ಲಾ ಹೊರಟಿದ್ದೇವೆ. ಆಗಿದ್ದಾಗ ಅವರ ಬಳಿ ಕುಳಿತು ಚರ್ಚೆ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದರು.
ಈಶ್ವರಪ್ಪ ಅವರು ರಾಜ್ಯಪಾಲರಿಗೆ ದೂರು ನೀಡಿರುವ ವಿಚಾರವು, ಉಪ ಚುನಾವಣೆಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದರು.
RELATED TOPICS:
English summary :JagadishShettar