ಮೀಸಲಾತಿ ಪ್ರಮಾಣ ಹೆಚ್ವಿಸಲು ಸರ್ಕಾರ ಬದ್ಧ: ಬಸವರಾಜ ಬೊಮ್ಮಾಯಿ | ಜನತಾ ನ್ಯೂಸ್
ದಾವಣಗೆರೆ : ಹಿಂದುಳಿದ ವರ್ಗದವರ ಹಿತ ಕಾಪಾಡಲು ಈಗಿರುವ ಮೀಸಲಾತಿ ಪ್ರಮಾಣವನ್ನು ಶೇ.50 ಕ್ಕಿಂತ ಹೆಚ್ಚು ಮಾಡುವಂತೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ಅಧಿಕೃತವಾಗಿ ಪ್ರಕಟಿಸಿದರು.
ಸುಪ್ರೀಂ ನಿಂದ ಒಳ್ಳೆಯ ಆದೇಶ ಬರುವ ನಿರೀಕ್ಷೆ ಇದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಅಧಿಕೃತವಾಗಿ ಪ್ರಕಟಿಸಿದರು.
ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಾಖಾಮಠ ಬೆಳ್ಳೊಡಿಯಲ್ಲಿ ನಿರ್ಮಿಸಲಾಗಿರುವ ನೂತನ ವಿದ್ಯಾರ್ಥಿನಿಲಯ, ಸಮುದಾಯ ಭವನ ಮತ್ತು ಮುಖ್ಯ ಮಹಾದ್ವಾರ ಉದ್ಘಾಟನೆ ಹಾಗೂ ಶಾಖಾಮಠದ 5 ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಹಾಲುಮತ ಸಮುದಾಯವನ್ನು ಎಸ್ಟಿಗೆ ಸೇರಿಸಬೇಕಾದರೆ ಮೀಸಲಾತಿ ಪ್ರಮಾಣವನ್ನು ಶೇಕಡಾ 7.5 ಕ್ಕೆ ಹೆಚ್ಚಿಸಬೇಕು. ಅದೇ ರೀತಿ ಬೇರೆ ಸಮಾಜದವರು ಮೀಸಲಾತಿಗೆ ಅರ್ಜಿ ಸಲ್ಲಿಸಿದ್ದಾರೆ. ಹಿಂದುಳಿದ ವರ್ಗಗಳ ಎಲ್ಲ ಸಮುದಾಯಗಳಿಗೆ ಮೀಸಲಾತಿ ಕಲ್ಪಿಸಬೇಕಾದರೆ ಈಗಿರುವ ಶೇಕಡ 50 ದಷ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೀಸಲಾತಿಯನ್ನು ಹೆಚ್ಚಿಸಲು ಬದ್ಧ ವಾಗಿದೆ ಎಂದು ಇದೇ ಮೊದಲ ಬಾರಿಗೆ ಅಧಿಕೃತವಾಗಿ ಪ್ರಕಟಿಸಿದರು.