ಕೋವಿಡ್ ಸ್ಪೋಟ : ರಾಜ್ಯದಲ್ಲಿಂದು 6150 ಜನಕ್ಕೆ ಸೋಂಕು, 39 ಸಾವು | ಜನತಾ ನ್ಯೂಸ್
ಬೆಂಗಳೂರು : ರಾಜ್ಯದಲ್ಲಿಂದು 6150 ಜನಕ್ಕೆ ಸೋಂಕು ತಗುಲಿದ್ದು, ಈ ಮೂಲಕ ಒಟ್ಟು ಸಕ್ರೀಯ ಪ್ರಕರಣಗಳ ಸಂಖ್ಯೆ 45104 ಕ್ಕೆ ಏರಿಕೆಯಾಗಿದೆ.
ಇಂದು 3,487 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಸದ್ಯ 45,107 ಸಕ್ರಿಯ ಪ್ರಕರಣಗಳಿದ್ದು, 351 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಒಂದೇ ದಿನ ರಾಜ್ಯದಲ್ಲಿ 39 ಜನ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ ಮೃತ ಪಟ್ಟವರ ಸಂಖ್ಯೆ 12696ಕ್ಕೆ ಏರಿಕೆಯಾಗಿದೆ.
ಇಂದು ಸಿಲಿಕಾನ್ ಸಿಟಿಯಲ್ಲಿ 4,266 ಜನಕ್ಕೆ ಸೋಂಕು ತಗುಲಿದೆ. ಬೆಂಗಳೂರಿನಲ್ಲಿಯೇ 26 ಜನರು ಸಾವನ್ನಪ್ಪಿದ್ದಾರೆ. ಸದ್ಯ ಬೆಂಗಳೂರು ನಗರದಲ್ಲಿ 32,605 ಸಕ್ರಿಯ ಪ್ರಕರಣಗಳಿವೆ.
RELATED TOPICS:
English summary :Corona Virus in Karnataka