ಕಲ್ಲೇಟಿನಿಂದ ಡ್ರೈವರ್ ಸಾವು, ಚಾಲಕನ ಕುಟುಂಬಕ್ಕೆ 30 ಲಕ್ಷ ಪರಿಹಾರ : ಸಾರಿಗೆ ನಿಗಮದಲ್ಲಿ ಉದ್ಯೋಗ | ಜನತಾ ನ್ಯೂಸ್
ಬೆಂಗಳೂರು : ಬಾಗಲಕೋಟೆಯಲ್ಲಿ ಸಾರಿಗೆ ನೌಕರ ಬಸ್ ಚಲಾಯಿಸಿಕೊಂಡು ಹೋಗುತ್ತಿರುವಾಗ ಕಿಡಿಗೇಡಿಗಳು ನಡೆಸಿದ ಕಲ್ಲು ತೂರಾಟದಿಂದಾಗಿ ಬಸ್ ಚಾಲಕ ಮೃತಪಟ್ಟಿದ್ದರು. ಬಸ್ ಚಾಲಕ ಮೃತ ಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯದ ಉಪಮುಖ್ಯಮಂತ್ರಿ, ಸಾರಿಗೆ ಸಚಿವರು ಆದ ಲಕ್ಷ್ಮಣ ಸವದಿ ಅವರು ಪತ್ರದ ಮೂಲಕ ಸಂತಾಪ ಸೂಚಿಸಿದ್ದಾರೆ.
ಘಟನೆ ಬಗ್ಗೆ ಮಾತನಾಡಿದ ಸವದಿ ಮೃತರ ಕುಟುಂಬಕ್ಕೆ ನಾನು ಶಾಂತಿ ಕೋರುತ್ತೇನೆ, ಅವರ ಕುಟುಂಬಕ್ಕೆ ಸಾಂತ್ವನಗಳನ್ನು ಹೇಳ ಬಯಸುತ್ತೇನೆ. ವರದಿ ಬಂದ ಕೂಡಲೇ ಕುಟುಂಬಕ್ಕೆ 30 ಲಕ್ಷ ರೂಪಾಯಿ ಮೊತ್ತದ ಪರಿಹಾರ ಹಾಗೂ ಕುಟುಂಬದ ಒಬ್ಬ ಸದಸ್ಯರಿಗೆ ಅನುಕಂಪ ಆಧಾರದ ಮೇಲೆ ಸಾರಿಗೆ ನಿಗಮದಲ್ಲಿ ಉದ್ಯೋಗ ನೀಡಲು ಸೂಚಿಸಿದ್ದೇನೆ ಎಂದರು.
ಮುಷ್ಕರದ ನಡುವೆ ಅಧಿಕಾರಿಗಳ ಆಣತಿ ಮೇರೆಗೆ ಕರ್ತವ್ಯಕ್ಕೆ ಹಾಜರಾಗಿದ್ದ ಅವರಿಗೆ ನಾಲ್ವರು ಅಪರಿಚಿತರು ಕಲ್ಲುಗಳಿಂದ ಹೊಡೆದಿದ್ದಾರೆ. ತಲೆಗೆ ತೀವ್ರ ಪೆಟ್ಟು ಬಿದ್ದ ಕಾರಣ ಪ್ರಜ್ಞೆ ತಪ್ಪಿ ದರು.ಪ್ರಯಾಣಿಕರು ,ಸ್ಥಳೀಯರು ಆಸ್ಪತ್ರೆಗೆ ಸೇರಿಸಲು ಕರೆದೊಯ್ಯುತ್ತಿದ್ದಾಲೇ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದರು.