ಜನರು ಗುಂಪು ಸೇರುವುದರಿಂದಲೇ ರಾಜ್ಯದಲ್ಲಿ ಕೊರೊನಾ ಹರಡುತ್ತಿದೆ : ಸಚಿವ ಡಾ.ಕೆ. ಸುಧಾಕರ್ | ಜನತಾ ನ್ಯೂಸ್
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಈ ನಡುವೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ಜನರು ಗುಂಪು ಸೇರೋದ್ರಿಂದಲೇ ಕೋವಿಡ್ ಸೋಂಕು ಹರಡುತ್ತಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾತನಾಡಿದ ಅವರು, ರಾತ್ರೋರಾತ್ರಿ ವೈದ್ಯರನ್ನು, ಆರೋಗ್ಯ ಕಾರ್ಯಕರ್ತರನ್ನು ಸೃಷ್ಟಿಸಲು ಸಾಧ್ಯವಿಲ್ಲ. ಜನ ಗುಂಪು ಸೇರಬಾರದು, ಗುಂಪು ಸೇರೋದ್ರಿಂದಲೇ ಕೋವಿಡ್ ಹರಡುತ್ತಿದೆ ಎಂದಿದ್ದಾರೆ.
ಕ್ಲೋಸ್ಡ್ ಸರ್ಕ್ಯೂಟ್ನಲ್ಲಿ ಗುಂಪಿದ್ದರೆ ಗಾಳಿ ಮೂಲಕವೂ ವೈರಸ್ ಹರಡುತ್ತದೆ ಎಂದ ಅವರು, ಕೋವಿಡ್ ನಿಯಂತ್ರಣದ ನಿಟ್ಟಿನಲ್ಲಿ ಬೆಂಗಳೂರಿಗೆ ಪ್ರತ್ಯೇಕ ನಿಯಮ ತರುತ್ತೇವೆ. ಕೋವಿಡ್ ಹೆಚ್ಚಿರುವ ಉಳಿದ ಜಿಲ್ಲೆಗಳಿಗೆ ಪ್ರತ್ಯೇಕ ನಿಯಮವನ್ನು ಜಾರಿಗೊಳಿಸುತ್ತೇವೆ ಎಂದು ತಿಳಿಸಿದರು.
ಇಂದು ರಾಜ್ಯಪಾಲರ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಯಲಿದೆ. ಸಭೆಯಲ್ಲಿ ಕಠಿಣ ನಿಯಮಗಳ ಜಾರಿ ಬಗ್ಗೆ ನಿರ್ಧರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ವಿರೋಧ ಪಕ್ಷಗಳು ಸರ್ಕಾರದ ಬೆಂಬಲಕ್ಕೆ ನಿಲ್ಲಬೇಕು. ಈ ಸಂದರ್ಭದಲ್ಲಿ ಆರೋಪ ಪ್ರತ್ಯಾರೋಪ ಮಾಡೋದು ಸರಿಯಲ್ಲ ಎಂದರು.