ರಾಜ್ಯಗಳಿಗೆ ಆಮ್ಲಜನಕ ಪೂರೈಕೆ ಹೆಚ್ಚಿಸುವ ಕುರಿತು ಉನ್ನತ ಮಟ್ಟದ ಸಭೆ ನಡೆಸಿದ ಪ್ರಧಾನಿ ಮೋದಿ | ಜನತಾ ನ್ಯೂಸ್
ನವದೆಹಲಿ : ಪಿಎಂ ನರೇಂದ್ರ ಮೋದಿ ಅವರು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ದೇಶಾದ್ಯಂತ ಆಮ್ಲಜನಕದ ಪೂರೈಕೆಯನ್ನು ಪರಿಶೀಲಿಸಿದರು ಮತ್ತು ಅದರ ಲಭ್ಯತೆಯನ್ನು ಹೆಚ್ಚಿಸುವ ಮಾರ್ಗಗಳು ಮತ್ತು ವಿಧಾನಗಳ ಕುರಿತು ಚರ್ಚಿಸಿದರು. ಆಮ್ಲಜನಕದ ಪೂರೈಕೆಯನ್ನು ಸುಧಾರಿಸಲು ಕಳೆದ ಕೆಲವು ವಾರಗಳಲ್ಲಿ ಕೈಗೊಂಡ ಪ್ರಯತ್ನಗಳ ಬಗ್ಗೆ ಅಧಿಕಾರಿಗಳು ಅವರಿಗೆ ವಿವರಿಸಿದರು.
ಪ್ರಧಾನಿ ಮೋದಿಯವರು, ಅನೇಕ ಅಂಶಗಳಲ್ಲಿ ವೇಗವಾಗಿ ಕೆಲಸ ಮಾಡುವ ಅಗತ್ಯತೆಯ ಬಗ್ಗೆ ಮಾತನಾಡಿದರು. ಆಮ್ಲಜನಕದ ಉತ್ಪಾದನೆಯನ್ನು ಹೆಚ್ಚಿಸುವುದು, ವಿತರಣೆಯ ವೇಗವನ್ನು ಹೆಚ್ಚಿಸುವುದು ಮತ್ತು ಆರೋಗ್ಯ ಸೌಲಭ್ಯಗಳಿಗೆ ಆಮ್ಲಜನಕದ ಬೆಂಬಲವನ್ನು ಒದಗಿಸಲು ನವೀನ ಮಾರ್ಗಗಳನ್ನು ಬಳಸುವುದು.
ರಾಜ್ಯಗಳಿಗೆ ಆಮ್ಲಜನಕದ ಪೂರೈಕೆ ಹೇಗೆ ಸ್ಥಿರವಾಗಿ ಹೆಚ್ಚಿಸಲಾಗುತ್ತಿದೆ ಎಂಬುದರ ಕುರಿತು ಪ್ರಧಾನ ಮಂತ್ರಿಗೆ ವಿವರಿಸಲಾಯಿತು. 20 ರಾಜ್ಯಗಳಿಂದ ಪ್ರತಿದಿನ 6,785ಮೆ.ಟನ್ ದ್ರವ ವೈದ್ಯಕೀಯ ಆಮ್ಲಜನಕದ ಪ್ರಸ್ತುತ ಬೇಡಿಕೆಗಿಂತ ಹೆಚ್ಚಾಗಿ, ಭಾರತ ಸರ್ಕಾರವು ಏಪ್ರಿಲ್ 21ರಿಂದ ಈ ರಾಜ್ಯಗಳಿಗೆ ದಿನಕ್ಕೆ 6,822 ಮೆ.ಟನ್ ಮೀಸಲಿಡಲಾಗುತ್ತಿದೆ.
ಅನಿವಾರ್ಯವಲ್ಲದ ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಕೆಯನ್ನು ನಿಷೇಧಿಸುವ ಮೂಲಕ ಹಾಗೂ ಖಾಸಗಿ ಮತ್ತು ಸಾರ್ವಜನಿಕ ಉಕ್ಕಿನ ಸ್ಥಾವರಗಳು, ಕೈಗಾರಿಕೆಗಳು, ಆಮ್ಲಜನಕ ತಯಾರಕರ ಕೊಡುಗೆಗಳೊಂದಿಗೆ ಕಳೆದ ಕೆಲವು ದಿನಗಳಲ್ಲಿ, ದ್ರವ ವೈದ್ಯಕೀಯ ಆಮ್ಲಜನಕದ ಲಭ್ಯತೆಯು ದಿನಕ್ಕೆ 3,300ಮೆ.ಟನ್ ಹೆಚ್ಚಾಗಿದೆ ಎಂದು ಗಮನಿಸಲಾಗಿದೆ.
ಮಂಜೂರಾದ ಪಿಎಸ್ಎ ಆಮ್ಲಜನಕ ಸ್ಥಾವರಗಳನ್ನು ಆದಷ್ಟು ಬೇಗ ಕಾರ್ಯಗತಗೊಳಿಸಲು ರಾಜ್ಯಗಳೊಂದಿಗೆ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ, ಎಂದು ಅಧಿಕಾರಿಗಳು ಪ್ರಧಾನಿ ಮೋದಿಯವರಿಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ, ರಾಜ್ಯಗಳಿಗೆ ಓ2 ಪೂರೈಕೆ ಸುಗಮವಾಗಿ, ಅಡೆತಡೆಯಿಲ್ಲದೆ ನಡೆಯುವಂತೆ ನೋಡಿಕೊಳ್ಳಬೇಕೆಂದು ಪ್ರಧಾನಿ ಮೋದಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು, ಎಂದು ಪ್ರಧಾನಿ ಕಾರ್ಯಾಲಯ ಪ್ರಕಟಿಸಿದೆ.