ಕೋವಿಡ್ ಪರಿಸ್ಥಿತಿ ನಿರ್ವಹಣೆ: ನಿವೃತ್ತ ಸೇನಾ ವೈದ್ಯಕೀಯ ಸಿಬ್ಬಂದಿಗಳ ಬಳಕೆ | ಜನತಾ ನ್ಯೂಸ್
ನವದೆಹಲಿ: : ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ರಕ್ಷಣಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರನ್ನು ಭೇಟಿ ಮಾಡಿ ದೇಶದಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ಎದುರಿಸಲು ಸಶಸ್ತ್ರ ಪಡೆ ಕೈಗೊಳ್ಳುತ್ತಿರುವ ಸಿದ್ಧತೆಗಳು ಮತ್ತು ಕಾರ್ಯಾಚರಣೆಗಳ ಕುರಿತು ಪರಿಶೀಲಿಸಿದ್ದಾರೆ ಎಂದು ವರದಿಯಾಗಿದೆ.
ಭಾರತೀಯ ಸೇನಾ ಪಡೆ ಭಾರತದ ಕೊರೋನಾ ಪರಿಸ್ಥಿತಿ ನಿಭಾಯಿಸಲು ಕೈಗೊಂಡಿರುವ ಕ್ರಮಗಳ ಕುರಿತು ಪ್ರದಾನಿ ನರೇಂದ್ರ ಮೋದಿಗೆ ರಕ್ಷಣಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ವಿವರಿಸಿದರು. ಇದರಲ್ಲಿ ಕಳೆದ 2 ವರ್ಷಗಳಲ್ಲಿ ನಿವೃತ್ತರಾದ ಶಸಸ್ತ್ರ ಪಡೆಗಳ ಎಲ್ಲಾ ವೈದ್ಯಕೀಯ ಸಿಬ್ಬಂದಿಯನ್ನು ಮತ್ತೆ ಕೆಲಸಕ್ಕೆ ಕರೆಸಿಕೊಳ್ಳಲಾಗುತ್ತಿದೆ. ವೈದ್ಯಕೀಯ ಅಧಿಕಾರಿಗಳಿಗೆ ವೈದ್ಯಕೀಯ ತುರ್ತು ಸಹಾಯ ಮಾರ್ಗಗಳ ಮೂಲಕ ತಮ್ಮ ಸೇವೆಯನ್ನು ಲಭ್ಯವಾಗುವಂತೆ ಮಾಡಲಾಗಿದೆ ಎಂದು ಬಿಪಿನ್ ರಾವತ್ ವಿವರಿಸಿದ್ದಾರೆ.
ಈ ಹಿಂದೆ ನಿವೃತ್ತರಾದ ಇತರ ವೈದ್ಯಕೀಯ ಅಧಿಕಾರಿಗಳಿಗೆ ವೈದ್ಯಕೀಯ ತುರ್ತು ಸಹಾಯ ಮಾರ್ಗಗಳ ಮೂಲಕ ತಮ್ಮ ಸೇವೆಗಳನ್ನು ಸಮಾಲೋಚನೆಗಾಗಿ ಲಭ್ಯವಾಗುವಂತೆ ಕೋರಲಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.
ಈ ವೇಳೆ ಕಳೆದ ಎರಡು ವರ್ಷಗಳಲ್ಲಿ ನಿವೃತ್ತರಾದ ಅಥವಾ ಪ್ರಬುದ್ಧ ನಿವೃತ್ತಿಯನ್ನು ಪಡೆದ ಸಶಸ್ತ್ರ ಪಡೆಗಳ ಎಲ್ಲಾ ವೈದ್ಯಕೀಯ ಸಿಬ್ಬಂದಿಯನ್ನು ಕೋವಿಡ್ -19 ಸೌಲಭ್ಯಗಳಲ್ಲಿ ತಮ್ಮ ಪ್ರಸ್ತುತ ವಾಸಸ್ಥಳದ ಸಮೀಪದಲ್ಲಿ ಕೆಲಸ ಮಾಡಲು ಕರೆಸಿಕೊಳ್ಳಲಾಗುತ್ತಿದೆ
ಕಮಾಂಡ್ ಹೆಚ್ ಕ್ಯೂ, ಕಾರ್ಪ್ಸ್ ಹೆಚ್ ಕ್ಯೂ, ಡಿವಿಷನ್ ಹೆಚ್ ಕ್ಯೂ, ನೌಕಾಪಡೆ ಮತ್ತು ವಾಯುಪಡೆಯ ಅದೇ ಹೆಚ್ ಕ್ಯೂ ಸಿಬ್ಬಂದಿ ನೇಮಕಾತಿಗಳ ಬಗ್ಗೆ ಎಲ್ಲಾ ವೈದ್ಯಕೀಯ ಅಧಿಕಾರಿಗಳನ್ನು ಆಸ್ಪತ್ರೆಗಳಲ್ಲಿ ನೇಮಿಸಲಾಗುವುದು. ಇದೇ ವೇಳೆ ಸೇನೆಯ ಬಳಿ ಇರುವ ಆಕ್ಸಿಜನ್ ಸಿಲಿಂಡರ್ ಗಳನ್ನು ಆಸ್ಪತ್ರೆಗಳಿಗೆ ತಲುಪಿಸಲಾಗುವುದು ಎಂದೂ ರಾವತ್ ಪ್ರಧಾನಿ ಮೋದಿ ಅವರಿಗೆ ಮಾಹಿತಿ ನೀಡಿದ್ದಾರೆ. ಇನ್ನು ಎಲ್ಲಾ ವೈದ್ಯಕೀಯ ಅಧಿಕಾರಿಗಳನ್ನು ನರ್ಸ್ ಗಳನ್ನು ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುವುದಕ್ಕೆ ನಿಯೋಜನೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಕೋವಿಡ್-19 ವಿರುದ್ಧದ ಹೋರಾಟಕ್ಕೆ ಬೃಹತ್ ಪ್ರಮಾಣದಲ್ಲಿ ವೈದ್ಯಕೀಯ ಸೌಕರ್ಯಗಳನ್ನು ಸೃಷ್ಟಿಸಲಾಗುತ್ತಿದೆ ಹಾಗೂ ಸೇನಾ ವೈದ್ಯಕೀಯ ಮೂಲಸೌಕರ್ಯಗಳನ್ನು ಸಾರ್ವಜನಿಕರಿಗೆ ಒದಗಿಸಲಾಗುತ್ತದೆ ಎಂದು ರಾವತ್ ಮಾಹಿತಿ ನೀಡಿದ್ದಾರೆ.