ಊರುಗಳಿಗೆ ತೆರಳಲು 12 ಸಾವಿರಕ್ಕೂ ಹೆಚ್ಚು ಬಸ್ಗಳ ವ್ಯವಸ್ಥೆ ಮಾಡಿದ ಸಾರಿಗೆ ಇಲಾಖೆ | ಜನತಾ ನ್ಯೂಸ್
ಬೆಂಗಳೂರು : ಇಂದು ರಾತ್ರಿ 9 ಗಂಟೆಯಿಂದ ಕೋವಿಡ್ ಕರ್ಫ್ಯೂ ಆರಂಭವಾಗಲಿದ್ದು ಜನರಿಗೆ ತಮ್ಮ ಊರುಗಳಿಗೆ ತೆರಳಲು ಅನುಕೂಲವಾಗಲಿ ಎಂಬ ನಿಟ್ಟಿನಲ್ಲಿ ಸಾರಿಗೆ ಇಲಾಖೆ ಹಚ್ಚುವರಿ ಬಸ್ಗಳ ವ್ಯವಸ್ಥೆ ಕಲ್ಪಿಸಿದೆ.
ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಸಾಕಷ್ಟು ಜನರು ತೆರಳುತ್ತಿದ್ದಾರೆ. ಕರ್ಫ್ಯೂ ಘೋಷಣೆಯಾದ ಬೆನ್ನಲ್ಲೇ ಜನರು ವಲಸೆ ಶುರುವಾಗಿದೆ. ಇದರಿಂದ ಜನರಿಗೆ ಅನುಕೂಲವಾಗಲು 12 ಸಾವಿರಕ್ಕೂ ಅಧಿಕ ಬಸ್ಗಳ ವ್ಯವಸ್ಥೆಯನ್ನು ಸಾರಿಗೆ ಇಲಾಖೆ ಕಲ್ಪಿಸಿದೆ.
3 ಸಾರಿಗೆ ನಿಗಮಗಳಿಂದ ಸಾರ್ವಜನಿಕರ ಬೇಡಿಕೆಗಳಿಗೆ ಅನುಗುಣವಾಗಿ12 ಸಾವಿರಕ್ಕೂ ಹೆಚ್ಚು ಬಸ್ಸುಗಳನ್ನು ವ್ಯವಸ್ಥೆ ಮಾಡಲಾಗಿದೆ. ಈ ಬಸ್ಸುಗಳು ಬೆಂಗಳೂರಿನಿಂದ ಹೊರಗಡೆ ಮತ್ತು ಬೇರೆ ಬೇರೆ ಪ್ರದೇಶಗಳಿಂದ ಬೆಂಗಳೂರಿಗೆ ಮತ್ತು ಇತರ ಪ್ರದೇಶಗಳಿಗೆ ಸಂಚರಿಸಲಿವೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಈ ಬಗ್ಗೆ ಪ್ರಕಟನೆ ಹೊರಡಿಸಿರುವ ಸವದಿ ಅವರು, ಈ ಬಸ್ಸುಗಳು ಬೆಂಗಳೂರಿನಿಂದ ಹೊರಗಡೆ ಮತ್ತು ಬೇರೆ ಬೇರೆ ಪ್ರದೇಶಗಳಿಂದ ಬೆಂಗಳೂರಿಗೆ ಮತ್ತು ಇತರ ಪ್ರದೇಶಗಳಿಗೆ ಸಂಚರಿಸಲಿವೆ ಎಂದು ತಿಳಿಸಿದ್ದಾರೆ. ನಾಳೆ ರಾತ್ರಿಯ ನಿಗದಿತ ಕರ್ಫ್ಯೂ ಸಮಯದ ಒಳಗೆ ಸಂಚರಿಸಲಿರುವ ಬಸ್ಸುಗಳ ಈ ವಿಶೇಷ ವ್ಯವಸ್ಥೆಯನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕೆಂದು ಕೇಳಿ ಕೊಂಡಿದ್ದಾರೆ.
ನಾಳೆ ರಾತ್ರಿಯ ಒಳಗೆ ತಮ್ಮ ಸ್ಥಳಕ್ಕೆ ತಲುಪಬೇಕಾದ ಪ್ರಯಾಣಿಕರು ಯಾವುದೇ ಆತಂಕವಿಲ್ಲದೆ, ನಿಗದಿತ ಕೋವಿಡ್ ಮಾರ್ಗಸೂಚಿ ಅನ್ವಯ ಮುಂಜಾಗ್ರತೆ ವಹಿಸಿ ಈ ಸಾರಿಗೆ ವ್ಯವಸ್ಥೆಯನ್ನು ಸೂಕ್ತವಾಗಿ ಬಳಸಿಕೊಳ್ಳಬಹುದಾಗಿದೆ ಸಚಿವರು ತಿಳಿಸಿದ್ದಾರೆ.
ರಾತ್ರಿ 9 ಗಂಟೆಯಿಂದ ಕೋವಿಡ್ ಕರ್ಫ್ಯೂ ಜಾರಿಗೆ ಬರಲಿದೆ. ಒಟ್ಟು 14 ದಿನಗಳ ಕಾಲ ಕೋವಿಡ್ ಕರ್ಫ್ಯೂ ಜಾರಿಯಲ್ಲಿ ಇರುತ್ತದೆ. ಹೀಗಿದ್ದರೂ ಕೋವಿಡ್ ನಿಯಂತ್ರಣಕ್ಕೆ ಬಾರದೆ ಇದ್ದಲ್ಲಿ ಮತ್ತೆ ಕರ್ಫ್ಯೂ ಮುಂದುವರಿಯುವ ಸಾಧ್ಯತೆ ಇದೆ.