Fri,Apr26,2024
ಕನ್ನಡ / English

ಜಿಂದಾಲ್​ಗೆ 3667 ಎಕರೆ ಭೂಮಿ ಕದ್ದುಮುಚ್ಚಿ ಮಾರುವುದು ಬಿಜೆಪಿ ಸಂಸ್ಕೃತಿನಾ? : ಬಿಎಸ್ ವೈ ಸರ್ಕಾರದ ವಿರುದ್ಧ ಕಿಡಿಕಾರಿದ HDK | ಜನತಾ ನ್ಯೂಸ್

27 Apr 2021
1282

ಬೆಂಗಳೂರು : ಬಿಜೆಪಿ ಸರ್ಕಾರ ಜಿಂದಾಲ್‌ ಮುಂದೆ ಏಕಾಏಕಿ ಮಂಡಿಯೂರಲೂ ಒಂದು ಕಾರಣವಿದೆ. ಅದೇನೆಂದು ಯಡಿಯೂರಪ್ಪರಿಗೆ ಚನ್ನಾಗಿ ಗೊತ್ತಿದೆ. ಅದನ್ನು ಅವರೇ ಬಹಿರಂಗಪಡಿಸಲಿ. ಲೀಸ್‌ ಕಂ ಸೇಲ್‌ ಆಧಾರದ ಭೂಮಿಯನ್ನು ಅಂತಿಮವಾಗಿ ಕ್ರಯ ಮಾಡಿಕೊಡಲೇಬೇಕಾದ ಕಾನೂನು ಬಿಜೆಪಿಗೆ ಈಗಲಾದರೂ ಅರಿವಿಗೆ ಬಂದಿದ್ದರೆ ಸಾಕು. ಇನ್ನಾದರೂ ಬಿಜೆಪಿ ಸಲ್ಲದ ಕಿತಾಪತಿ ಮಾಡದಿರಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಮೈತ್ರಿ ಸರ್ಕಾರದಲ್ಲಿ ನಾವು ಭೂಮಿ ಮಾರಾಟಕ್ಕೆ ನಿರ್ಧರಿಸಿದ್ದೆವು. ಆಗ ಬಿ.ಎಸ್.ಯಡಿಯೂರಪ್ಪರಿಂದ ಅಹೋರಾತ್ರಿ ಧರಣಿ ನಡೆಯಿತು. ಬಿಜೆಪಿ ಯುವ ಮೋರ್ಚಾದಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗಿತ್ತು. ಮೈತ್ರಿ ಸರ್ಕಾರದ ಮೇಲೆ ಕಿಕ್‌ಬ್ಯಾಕ್ ಆರೋಪ ಮಾಡಿದ್ದರು. ಭೂಮಿಯ ಮಾರಾಟವನ್ನು ವಿರೋಧಿಸಿ ಹೋರಾಟ ಮಾಡಿದ್ದರು. ಆದರೆ ಈಗ ಬಿಜೆಪಿ ಸರ್ಕಾರ ಸದ್ದಿಲ್ಲದೆ ಭೂಮಿ ಮಾರಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ವಿರೋಧ ಪಕ್ಷದಲ್ಲಿದ್ದಾಗ ಭೂಮಿ ಮಾರಾಟಕ್ಕೆ ವಿರೋಧಿಸಿದ್ರೆ ಆಡಳಿತಕ್ಕೆ ಬಂದಾಗ ನೀವು ಭೂಮಿ ಮಾರಾಟ ಮಾಡಿದ್ದೀರಿ. ಕದ್ದುಮುಚ್ಚಿ ಭೂಮಿ ಮಾರುವುದು ಬಿಜೆಪಿ ಸಂಸ್ಕೃತಿನಾ? ಎಂದು ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಪ್ರಶ್ನೆ ಹಾಕಿದ್ದಾರೆ.

ಬಿಎಸ್‌ವೈ ಅಹೋರಾತ್ರಿ ಧರಣಿ, ಬಿಜೆಪಿ ಯುವ ಮೋರ್ಚಾದಿಂದ ವಿಧಾನಸೌಧ ಮುತ್ತಿಗೆ, ಮೈತ್ರಿ ಸರ್ಕಾರದ ಮೇಲೆ ಕಿಕ್‌ ಬ್ಯಾಕ್‌ ಆರೋಪ... ಜಿಂದಾಲ್‌ಗೆ 3,677 ಎಕರೆ ಭೂಮಿ ಮಾರಾಟ ಮಾಡಲು ನಿರ್ಧರಿಸಿದ್ದ ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ನಡೆಸಿದ್ದ ಹೋರಾಟಗಳಿವು. ಆದರೆ ಇಂದು ಬಿಜೆಪಿ ಅದೇ ಜಿಂದಾಲ್‌ಗೆ ಅದೇ ಭೂಮಿಯನ್ನು ಸದ್ದಿಲ್ಲದೇ ಮಾರಿದೆ ಎಂದು ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ವಿರೋಧಕ್ಕಾಗಿಯೇ ವಿರೋಧ ಮಾಡುವುದು, ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದು ಮುಚ್ಚಿ ಮಾಡುವುದು ಬಿಜೆಪಿ ಸಂಸ್ಕೃತಿ. ಜಿಂದಾಲ್‌ಗೆ ಭೂಮಿ ನೀಡುವ ವಿಚಾರದಲ್ಲಿ ಅಂದು ನನ್ನ ಸರ್ಕಾರದ ವಿರುದ್ಧ, ನನ್ನ ವಿರುದ್ಧ ಸಲ್ಲದ ಆರೋಪ ಮಾಡಿದ್ದ ಬಿಎಸ್‌ವೈ ಇಂದು ಅದೇ ಆರೋಪಗಳನ್ನು ತಮ್ಮ ಮೇಲೆ ಹೊತ್ತುಕೊಳ್ಳುವರೇ ಎಂದು ಪ್ರಶ್ನಿಸಿದ್ದಾರೆ.

ಆಗ ಕಾಂಗ್ರೆಸ್‌ ಶಾಸಕರಾಗಿದ್ದ, ಈಗ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿರುವ ಆನಂದ್‌ ಸಿಂಗ್‌ ಜಿಂದಾಲ್‌ ಅನ್ನು ಈಸ್ಟ್‌ ಇಂಡಿಯಾ ಕಂಪನಿ ಎಂದಿದ್ದರು. ಜಿಂದಾಲ್‌ ವಿರುದ್ಧ ಅಂದಿನ ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಅವರೇ ಇರುವ ಈಗಿನ ಸಂಪುಟ ಸಭೆ ಜಿಂದಾಲ್‌ಗೆ ಭೂಮಿ ನೀಡಿದೆ. ಆನಂದ್‌ ಸಿಂಗ್‌ ಈಗ ಈಸ್ಟ್‌ ಇಂಡಿಯಾ ಕಂಪನಿ ಪರವಾಗಿದ್ದಾರಾ?. ಜಿಂದಾಲ್‌ಗೆ ಭೂಮಿ ನೀಡುವ ವಿಚಾರವಾಗಿ ಅಂದು ಮೈತ್ರಿ ಸರ್ಕಾರದ ಭಾಗವಾಗಿದ್ದುಕೊಂಡೇ ಟೀಕೆ ಮಾಡಿದ್ದ, ದಾಖಲೆ, ಪತ್ರಗಳನ್ನು ಬಿಡುಗಡೆ ಮಾಡಿದ್ದ ಎಚ್‌.ಕೆ ಪಾಟೀಲ್‌ ಅವರು ಈಗ ಏನು ಮಾಡುತ್ತಿದ್ದಾರೆ. ಅವರ ದಾಖಲೆ ಪತ್ರಗಳೆಲ್ಲವೂ ಎಲ್ಲಿ ಅಡಗಿಕೊಂಡಿವೆ? ಈಗ ಅವುಗಳನ್ನು ಮತ್ತೊಮ್ಮೆ ಬಿಡುಗಡೆ ಮಾಡಲು ಯಾರು ಅಡ್ಡ ಇದ್ದಾರೆ? ಎಂದು ದೂರಿದ್ದಾರೆ.

ಜಿಂದಾಲ್‌ ಕಂಪನಿಗೆ 3,667 ಎಕರೆ ಭೂಮಿ ಮಾರಾಟ ಮಾಡಲು ಬಿಜೆಪಿ ಸರ್ಕಾರದ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಆದರೆ, ಎಕರೆವಾರು ಶುದ್ಧ ಕ್ರಯಕ್ಕೆ ನಿಗದಿ ಮಾಡಿದ ಮೊತ್ತವೆಷ್ಟು ಎಂಬ ಪ್ರಶ್ನೆಗೆ ಗೃಹ ಸಚಿವರೇ ಗೊತ್ತಿಲ್ಲ ಎಂಬ ಉತ್ತರ ನೀಡಿದ್ದಾರೆ. ಸ್ವತಃ ಗೃಹ ಸಚಿವರಿಗೇ ಮಾಹಿತಿ ಇಲ್ಲ ಎಂದರೆ ಏನು ಅರ್ಥ? ಇದನ್ನು ನಂಬಲು ಸಾಧ್ಯವೇ ಎಂದಿರುವ ಅವರು, ಲೀಸ್‌ ಕಂ ಸೇಲ್‌ ಆಧಾರದ ಭೂಮಿಯನ್ನು ಶುದ್ಧ ಕ್ರಯ ಮಾಡಿಕೊಡಬೇಕಾದ್ದು ಕಾನೂನು. ಅದನ್ನೇ ನನ್ನ ಸರ್ಕಾರ ಮಾಡಲು ಹೊರಟಿತ್ತು. ಆದರೆ ಬಿಜೆಪಿ ಕಿತಾಪತಿ ಮಾಡಿತ್ತು. ಜನರಲ್ಲಿ ಮೂಡಬಹುದಾದ ಸಂಶಯ ನಿವಾರಣೆ ಮಾಡಿ ನಂತರ ಭೂಮಿ ನೀಡುವ ನಿರ್ಧಾರಕ್ಕೆ ಬಂದ ನನ್ನ ಸರ್ಕಾರ ಮಾರಾಟ ಪ್ರಕ್ರಿಯೆಯನ್ನು ನಿಲ್ಲಿಸಿತ್ತು. ಬಿಜೆಪಿಗೆ ಈಗ ಜ್ಞಾನೋದಯವಾಗಿದೆ ಎಂದಿದ್ದಾರೆ.

ಲೀಸ್‌ ಕಂ ಸೇಲ್‌ ಆಧಾರದ ಭೂಮಿಯನ್ನು ಅಂತಿಮವಾಗಿ ಕ್ರಯ ಮಾಡಿಕೊಡಲೇಬೇಕಾದ ಕಾನೂನು ಬಿಜೆಪಿಗೆ ಈಗಲಾದರೂ ಅರಿವಿಗೆ ಬಂದಿದ್ದರೆ ಸಾಕು. ಇನ್ನಾದರೂ ಬಿಜೆಪಿ ಸಲ್ಲದ ಕಿತಾಪತಿ ಮಾಡದಿರಲಿ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

RELATED TOPICS:
English summary :HD Kumaraswamy

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...