14 ದಿನ ಸ್ವಯಂ ನಿರ್ಬಂಧ ವಿಧಿಸಿಕೊಂಡು ಮನೆಯಲ್ಲೇ ಇರಿ | ಜನತಾ ನ್ಯೂಸ್
ಬೆಂಗಳೂರು : ಜನರು ಸ್ವಯಂ ನಿರ್ಬಂಧ ವಿಧಿಸಿಕೊಂಡು ಮನೆಯಲ್ಲೇ ಇದ್ದು ಕೊರೊನಾ ವಿರುದ್ಧದ ಹೋರಾಟಕ್ಕೆ ಸಾಥ್ ನೀಡಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಕೈಗೊಂಡಿರುವ ಈ ಬಿಗಿ ಕ್ರಮಗಳನ್ನು ಯಶಸ್ವಿಗೊಳಿಸಬೇಕಾದ ಜವಾಬ್ದಾರಿ ರಾಜ್ಯದ ಜನರ ಮೇಲಿದೆ ಎಂದರು. ಇಂದು ರಾತ್ರಿ 9 ಗಂಟೆಯಿಂದ 14 ದಿನ ಹೊಸ ಮಾರ್ಗಸೂಚಿ ಇರಲಿದೆ.
ಹಗಲು ಸಮಯ ಕೂಡ ಬಿಗಿಯಾದ ಕ್ರಮವನ್ನು ಸರ್ಕಾರ ತೆಗೆದುಕೊಂಡಿದೆ. ಈ 14 ದಿನ ಜನರು ಸ್ವಯಂ ನಿಯಂತ್ರಣ ಮಾಡಿಕೊಂಡರೆ ಕೊರೊನಾ ಎದುರಿಸಲು ಸಾಧ್ಯವಿದೆ. ಸ್ವಯಂ ನಿಯಂತ್ರಣ ಬಹಳ ಅವಶ್ಯಕತೆ ಇದೆ. ಸ್ವಯಂ ನಿಯಂತ್ರಣದಲ್ಲೇ ಇದರ ಯಶಸ್ವಿ ಇದೆ.
14 ದಿನ ಪ್ರತಿಯೊಬ್ಬರೂ ಕೂಡ ಜಾಗೃತಿಯಾಗಿರಬೇಕು. ನಮ್ಮ ಆರೋಗ್ಯದ ಜೊತೆ ಇತರರ ಆರೋಗ್ಯವೂ ಮುಖ್ಯ ಎಂಬುದನ್ನು ಮನಗಾಣಬೇಕು. ಸರ್ಕಾರ ಹೇರಿರುವ ನಿರ್ಬಂಧಕ್ಕೆ ಅನುಗುಣವಾಗಿ ನಡೆದುಕೊಳ್ಳುವುದು ಬಹಳ ಅವಶ್ಯವಿದೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕರ್ಫ್ಯೂ ಯಶಸ್ವಿಗೊಳಿಸಬೇಕಾದ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.