ಇಂದು ಹಸೆಮಣೆ ಏರಬೇಕಿದ್ದ ಮದುಮಗನನ್ನು ಬಲಿಪಡೆದ ಕೊರೊನಾ | ಜನತಾ ನ್ಯೂಸ್
ಚಿಕ್ಕಮಗಳೂರು : ಇಂದು ಹಸೆಮಣೆ ಏರಬೇಕಿದ್ದ ಮದುಮಗ ಮಹಾಮಾರಿ ಕರೊನಾ ಸೋಂಕಿಗೆ ಬಲಿಯಾಗಿರುವ ಘಟನೆ ಕೊಪ್ಪ ತಾಲೂಕಿನ ದೇವರಕೊಡಿಗೆ ಗ್ರಾಮದಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ದೇವರಕೊಡಿಗೆ ಗ್ರಾಮದ 32 ವರ್ಷದ ಪೃಥ್ವಿರಾಜ್ ಎಂಬ ಯುವಕ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ.
ಪೃಥ್ವಿರಾಜ್ ಇಂದು ವೈವಾಹಿಕ ಜೀವನಕ್ಕೆ ಕಾಲಿಡಬೇಕಿತ್ತು. ಪೃಥ್ವಿರಾಜ್ 10 ದಿನಗಳ ಹಿಂದೆಯಷ್ಟೇ ಬೆಂಗಳೂರಿನಿಂದ ಮನೆಗೆ ಬಂದಿದ್ದರು. ಆದರೆ, ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ವಿವಾಹ ಕಾರ್ಯಕ್ರಮದ ನಿಮಿತ್ತ ಸಂಭ್ರಮ ನೆಲೆಸಬೇಕಿದ್ದ ಮನೆಯಲ್ಲಿ ಕೊರೊನಾದಿಂದಾಗಿ ಸೂತಕ ಆವರಿಸಿದ್ದು, ಮನೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.