ಡ್ರೋನ್ ಮೂಲಕ ಸಾರ್ವಜನಿಕ ಸ್ಥಳಗಳ ಸ್ಯಾನಿಟೈಸೇಷನ್ಗೆ ಸಿಎಂ ಚಾಲನೆ! | ಜನತಾ ನ್ಯೂಸ್
ಬೆಂಗಳೂರು : ನಾಳೆಯಿಂದ ನಗರದಲ್ಲಿ ಏಳೆಂಟು ದಿನಗಳ ಕಾಲ ಡ್ರೋಣ್ ಮೂಲಕ ಸ್ಯಾನಿಟೈಸೇಷನ್ ಕಾರ್ಯ ನಡೆಯಲಿದೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮೂರು ಡ್ರೋಣ್ಗಳ ಮೂಲಕ ಸಾರ್ವಜನಿಕ ಸ್ಥಳಗಳ ಸ್ಯಾನಿಟೈಸೇಷನ್ ಮಾಡುವ ಕಾರ್ಯಾಚರಣೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು.
ಸಂಸದ ಪಿಸಿ ಮೋಹನ್ ಸ್ವಂತಃ ಖರ್ಚಿನಲ್ಲಿ ಚೆನ್ನೈನಿಂದ 3 ಡ್ರೋಣ್ಗಳನ್ನು ತರಿಸಲಾಗಿದ್ದು, ಈ ಡ್ರೋಣ್ಗಳ ಮೂಲಕ ನಗರದಲ್ಲಿ ಸ್ಯಾನಿಟೈಸೇಷನ್ ಸಿಂಪಡಣೆ ಮಾಡಲಾಗುವುದು. ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ನಾಳೆಯಿಂದ ಏಳೆಂಟು ದಿನಗಳ ಕಾಲ ಒಟ್ಟು ಐದು ಡ್ರೋಣಗಳ ಮೂಲಕ ಸ್ಯಾನಿಟೈಸೇಷನ್ ಕಾರ್ಯ ನಡೆಯಲಿದೆ. ಈ ಕಾರ್ಯಕ್ಕೆ ಗೃಹ ಕಚೇರಿಯಲ್ಲಿ ಸಿಎಂ ಹಸಿರು ನಿಶಾನೆ ತೋರಿದರು.
ಡ್ರೋನ್ಗಳಿಗೆ ಚಾಲನೆ ನೀಡಿ ಮಾತನಾಡಿದ ಸಿಎಂ ಯಡಿಯೂರಪ್ಪ, ಇಡೀ ದೇಶವೇ ಕೊರೊನಾ ಸಂಕಷ್ಟ ಎದುರಿಸುತ್ತಿದೆ. ಈ ಸಂದರ್ಭದಲ್ಲಿ ತಂತ್ರಜ್ಞಾನದ ಮೂಲಕ ತುರ್ತಾಗಿ ಕೋವಿಡ್ ಔಷಧ ತಲುಪಿಸಲು ಡ್ರೋಣ್ ಗಳು ಕಾರ್ಯಾಚರಣೆಗೆ ಇಳಿದಿವೆ.
ಸುಮಾರು 45 ಕೆಜಿ ಸಾಮಗ್ರಿ ತುಂಬಿ ಹಾರುವ ಡ್ರೋಣ್ ಗಳು ನಮ್ಮ ರಾಜ್ಯದಲ್ಲೂ ಸೇವೆ ಕೊಡುತ್ತಿವೆ. ಗರುಡ ಸಂಸ್ಥೆಯವರು ಈ ಡ್ರೋಣ್ ಸೇವೆ ಉಚಿತವಾಗಿ ಕೊಡುತ್ತಿದ್ದಾರೆ. ಸ್ಯಾನಿಟೈಸಿಂಗ್ ಅನ್ನೂ ಡ್ರೋಣ್ ಮೂಲಕ ಮಾಡಬಹುದು ಎಂದರು.