ಜನತಾ ಕರ್ಫ್ಯೂನಿಂದ ಉಪಯೋಗವಿಲ್ಲ, ಸಂಪೂರ್ಣ ಲಾಕ್ಡೌನ್ ಮಾಡಿ | ಜನತಾ ನ್ಯೂಸ್
ಮೈಸೂರು : ಅರ್ಧ ಲಾಕ್ಡೌನ್ ಮಾಡಿರುವುದರಿಂದ ಕೊರೊನಾ ಕಂಟ್ರೋಲ್ ಮಾಡಲು ಸಾಧ್ಯವಿಲ್ಲ. ಹೀಗಾಗಿ ಪೂರ್ತಿ ಲಾಕ್ಡೌನ್ ಮಾಡಿ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಸಲಹೆ ನೀಡಿದ್ದಾರೆ.
ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ಅಗತ್ಯ ವಸ್ತುಗಳು, ಮದ್ಯ ಕೊಳ್ಳಲು ಅವಕಾಶ ನೀಡಲಾಗಿದೆ. ಇದರಿಂದ ಜನರು ಗುಂಪು ಗುಂಪಾಗಿ ಹೊರ ಬರುತ್ತಿದ್ದಾರೆ. ಇದು ಕೊರೊನಾ ಹರಡಲು ಕಾರಣವಾಗುತ್ತಿದೆ. ಕೊರೋನಾ ಕಡಿವಾಣ ಹಾಕಲು ರಾಜ್ಯ ಸಂಪೂರ್ಣ ಲಾಕ್ಡೌನ್ ಆಗಲೇಬೇಕು ಎಂದು ಹೇಳಿದ್ದಾರೆ.
ಲಾಕ್ಡೌನ್ ಆದರೆ ರೋಗಿಗಳಿಗೆ ಬೇಕಾದ ಅಗತ್ಯ ಸೌಲಭ್ಯಗಳನ್ನ ಮಾಡಿಕೊಂಡು ಕಂಟ್ರೋಲ್ ಮಾಡಬಹುದು. ಭಾರತದ ಕೊರೋಸನಾ ಪರಿಸ್ಥಿತಿಯನ್ನ ವಿದೇಶಿ ಮಧ್ಯಮಗಳು ಅಣಕ ಮಾಡುತ್ತಿವೆ. WHO ಸೇರಿ ವಿವಿಧ ಸಂಸ್ಥೆಗಳು ಭಾರತಕ್ಕೆ ಸಹಾಯ ಮಾಡಲು ಮುಂದೆ ಬಂದಿರೋದು ಸ್ವಾಗತಾರ್ಹವಾದ ವಿಚಾರವಾಗಿದೆ. ಆದರೆ ಪರಿಸ್ಥಿತಿ ಹೀಗೆ ಬಿಟ್ಟರೆ ಮುಂದೆ ತೊಂದರೆ ಆಗಲಿದೆ. ಮುಖ್ಯಮಂತ್ರಿಗಳೇ ಕೂಡಲೇ ಕರ್ನಾಟಕವನ್ನು ಸಂಪೂರ್ಣ ಲಾಕ್ಡೌನ್ ಮಾಡಿ ಅಂತ ವಿಶ್ವನಾಥ್ ಒತ್ತಾಯಿಸಿದ್ದಾರೆ.