ನಿನ್ನೆ ಹಸೆಮಣೆಗೇರಿದ್ದ ಮದುಮಗ ಇಂದು ಕರೊನಾಗೆ ಬಲಿ! | ಜನತಾ ನ್ಯೂಸ್
ಹುಬ್ಬಳ್ಳಿ : ಜಿಲ್ಲೆಯ ಕಲಘಟಗಿ ತಾಲೂಕಿನ ತಬಕದಹೊನ್ನಳ್ಳಿ ಗ್ರಾಮದಲ್ಲಿ ನಿನ್ನೆಯಷ್ಟೇ ಮದುವೆಯಾಗಿ ವಧುವಿನ ಮನೆಗೆ ಬಂದಿದ್ದ ಮದುಮಗ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ.
ಶಶಿಕುಮಾರ ಪಟ್ಟಣಶೆಟ್ಟಿ(27) ಮೃತ ದುರ್ದೈವಿ. ತಬಕದಹೊನ್ನಳ್ಳಿಯಲ್ಲಿ ಶನಿವಾರ ವರನ ಸ್ವಗೃಹದಲ್ಲಿ ಸರಳವಾಗಿ ಮದುವೆ ಜರುಗಿತ್ತು. ಶಶಿಕರುಮಾರ್ ಪಟ್ಟಣಶೆಟ್ಟಿ ನಾಲ್ಕು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಜ್ವರದ ನಡುವೆ ನಿನ್ನೆ ಮದುವೆ ಮಾಡಿಕೊಂಡಿದ್ದರು.
ಇಂದು ಮಾವನ ಮನೆಗೆ ತೆರಳಿದ್ದರು. ಈ ವೇಳೆ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸುದ್ದಿ ಕೇಳಿ ಇಡೀ ಕುಟುಂಬ ಆಘಾತಕ್ಕೊಳಗಾಗಿದೆ.
RELATED TOPICS:
English summary :Dharwad