Thu,Apr25,2024
ಕನ್ನಡ / English

ಕೋವಿಡ್ ಬಂದು ನಾನ್ ಸತ್ತೋದ್ರು ಪರವಾಗಿಲ್ಲ.. ನಾಳೆ ಸಿಎಂ ಮನೆ ಮುಂದೆ ಧರಣಿ ಕೂರೋದೆ: ರೇವಣ್ಣ | ಜನತಾ ನ್ಯೂಸ್

02 May 2021
2272

ಹಾಸನ : ಕೋವಿಡ್ ಬಂದು ಬೇಕಾದ್ರೆ ನಾನ್ ಸತ್ತೋದ್ರು ಪರವಾಗಿಲ್ಲ. ಯಾರು ಹೇಳಿದ್ರೂ ಕೇಳಲ್ಲ. ನಾಳೆ ಸಿಎಂ ಮನೆ ಮುಂದೆ ಹೋಗಿ ಅಲ್ಲಿಯೇ ಧರಣಿ ಕೂರೋದೆ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಹೇಳಿದ್ದಾರೆ.

ಜನರು ರೋಡಲ್ಲಿ ಬಿದ್ದು ಸಾಯ್ತಿದ್ದಾರೆ, ಹೇಳೋರು ಕೇಳೋರು ಯಾರು ಇಲ್ಲವೇ? ಖಾಸಗಿ ಆಸ್ಪತ್ರೆ ಬೆಡ್​ಗಳು ಎಂಎಲ್​ಎ ಮನೆಯವರಿಗೆ ಮತ್ತು ಅವರ ಸಂಬಂಧಿಕರು, ಅಧಿಕಾರಿಗಳ ಮಕ್ಕಳಿಗೆ ಮೀಸಲಿವೆ. ಹೇಳೋರು ಕೇಳೋರು ಯಾರೂ ಇಲ್ವೆ? ಎಂದು ಮಾಜಿ ಸಚಿವ ಎಚ್​.ಡಿ. ರೇವಣ್ಣ ರಾಜ್ಯ ಸರ್ಕಾರವನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು.

ಹಾಸನ ಜಿಲ್ಲೆಗೆ ಮಲತಾಯಿ ಧೋರಣೆ ತೋರುತ್ತಿದ್ದಾರೆ. ಹಾಸನ ಹಿಮ್ಸ್ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ಕೃಷ್ಣಮೂರ್ತಿ ಅವರನ್ನ ದಿಢೀರ್ ವರ್ಗಾವಣೆ ಮಾಡಿರುವ ಸರ್ಕಾರದ ವಿರುದ್ಧ ಗರಂ ಆದ ರೇವಣ್ಣ, ನಮ್ಮ ಜಿಲ್ಲಾಸ್ಪತ್ರೆಯಲ್ಲಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ರೆಮ್ಡಿಸಿವಿಯರ್ ಚುಚ್ಚುಮದ್ದು ಸಿಕ್ತಿಲ್ಲ. ಜನ ಸಾಯುತ್ತಿದ್ದಾರೆ, ಇವನ್ನೆಲ್ಲಾ ನೋಡಿಕೊಂಡು ನಾನು ಬದುಕಿರಬೇಕಾ? ಹಾಗಾಗಿ ನಾಳೆ ಬೆಳಗ್ಗೆ ಎದ್ದು ಶಿವಪ್ಪನ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿಕೊಂಡು ಒಂಬತ್ತು ಗಂಟೆ ಒಳಗೆ ಮುಖ್ಯಮಂತ್ರಿ ಮನೆ ಮುಂದೆ ಅಲ್ಲೇ ಮಲ್ಕೊಂಡು ಧರಣಿ ಮಾಡ್ತೀನಿ ಎಂದಿದ್ದಾರೆ.

ಜಿಲ್ಲೆಯಲ್ಲಿ ಕೂಲಿ ಕಾರ್ಮಿಕರ ಪರಿಸ್ಥಿತಿ ಶೋಚನೀಯವಾಗಿದೆ. ಸಂಕಷ್ಟ ಪರಿಸ್ಥಿತಿಯಲ್ಲಿ ಬಡವರಿಗೆ ರಾಗಿ, ಅಕ್ಕಿ, ಗೋಧಿ, ಸೇರಿದಂತೆ ಒಂದೊಂದು ಕುಟುಂಬಕ್ಕೆ ₹5 ಸಾವಿರ ಕೊಡಿ. ಬಡವರ ಶಾಪ ಒಳ್ಳೆದಲ್ಲ. ರಾಜ್ಯದ ತೆರಿಗೆ ಹಣದಲ್ಲಿ ಬಡವರಿಗೆ ಇಂಥ ಸಂದರ್ಭದಲ್ಲಿ ಕೊಡಿ ಎಂದು ಆಗ್ರಹ ಮಾಡಿದರು.

ನನಗೆ ಕರೊನಾ ಬಂದ್ರೂ ಪರವಾಗಿಲ್ಲ. ಸಿಎಂ ಮನೆ ಮುಂದೆ ಧರಣಿ ಮಾಡಿ ಅಲ್ಲಿಯೇ ಮಲಗುತ್ತೇನೆ. ಕೂಡಲೇ ಜಿಲ್ಲಾ ಸರ್ಜನ್​ ವರ್ಗಾವಣೆ ರದ್ದು ಮಾಡಲಿ ಎಂದು ರೇವಣ್ಣ ಆಗ್ರಹಿಸಿದರು. ನಮ್ಮಪ್ಪ ಹೇಳಿದರೂ ನಾನು ಕೇಳಲ್ಲ, ಹೋರಾಡುತ್ತೇನೆ. ನಮ್ಮ ಜನವೇ ಇಲ್ಲ ಅಂದಮೇಲೆ ನನ್ನ ಪ್ರಾಣ ಇಟ್ಕೊಂಡು ಏನು ಮಾಡೋದು? ಮೇ ತಿಂಗಳ ಅಂತಿಮದೊಳಗೆ ಯಾರು ಉಳೀತಾರೆ, ಯಾರು ಇರಲ್ಲ ಅನ್ನೊದು ಗೊತ್ತಿಲ್ಲ. ಈ ಮಾತನ್ನ ತಜ್ಞರು ಹೇಳುತ್ತಿದ್ದಾರೆ ಎಂದರು.

RELATED TOPICS:
English summary :Revanna

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...