ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ ಆಮ್ಲಜನಕ ಖಾಲಿ: 20ಕ್ಕೂ ಹೆಚ್ಚು ಕರೊನಾ ರೋಗಿಗಳ ಸಾವು! | ಜನತಾ ನ್ಯೂಸ್
ಚಾಮರಾಜನಗರ : ಆಮ್ಲಜನಕ ಸಿಗದೇ ಉಸಿರಾಟದ ಸಮಸ್ಯೆ ಉಂಟಾಗಿ 20ಕ್ಕೂ ಹೆಚ್ಚು ಕರೊನಾ ರೋಗಿಗಳು ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
ಆಕ್ಸಿಜನ್ ಸಿಗದೇ ಭಾನುವಾರ ರಾತ್ರಿ 16, ಬೆಳಗಿನ ಜಾವ 6ಕ್ಕೂ ಹೆಚ್ಚು ಸೋಂಕಿತರು ಮೃತಪಟ್ಟಿದ್ದಾರೆ. ಈ ವಿಷಯವನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಖಚಿತಪಡಿಸಿದ್ದಾರೆ.
ನಿನ್ನೆ ರಾತ್ರಿ ಆಕ್ಸಿಜನ್ ಖಾಲಿಯಾಗಿದ್ದು ಎಂದು ರೋಗಿಗಳ ಸಂಬಂಧಿಕರ ಆರೋಪ ಮಾಡುತ್ತಿದ್ದು, ಜಿಲ್ಲಾಸ್ಪತ್ರೆ ಮುಂದೆ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಇದಕ್ಕೆ ಆಕ್ಸಿಜನ್ ಕೊರತೆ ಕಾರಣ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ.
ಕೊನೆ ಕ್ಷಣದಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ ಮಧ್ಯಪ್ರವೇಶಿಸಿ 50 ಸಿಲಿಂಡರ್ಗಳನ್ನು ಕಳುಹಿಸಿಕೊಟ್ಟಿದ್ದರಿಂದ ಸಮಸ್ಯೆ ತಾತ್ಕಾಲಿಕವಾಗಿ ಬಗೆಹರಿದಿದೆ. ಕೋವಿಡ್ ಆಸ್ಪತ್ರೆಯಲ್ಲಿ 24 ವೆಂಟಿಲೇಟರ್ಗಳಿವೆ, 53 ಐಸಿಯು ಹಾಗೂ 55 ಆಮ್ಲಜನಕ ಸಹಿತ ಹಾಸಿಗೆಗಳಿವೆ. ಬಹುತೇಕ ಎಲ್ಲವೂ ಭರ್ತಿಯಾಗಿವೆ.