Fri,Apr26,2024
ಕನ್ನಡ / English

ಈ ಸಾವುಗಳಿಗೆ ಯಾರು ಹೊಣೆ? ಇದು ಸೋಂಕಿನಿಂದಾದ ಸಾವುಗಳಲ್ಲ, ಅವ್ಯವಸ್ಥೆಯ ಸರ್ಕಾರದಿಂದಾದ ಕೊಲೆ.. | ಜನತಾ ನ್ಯೂಸ್

03 May 2021
1110

ಬೆಂಗಳೂರು : ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ 24 ರೋಗಿಗಳು ಸಾವಪ್ಪಿರುವುದಕ್ಕೆ ಕಾಂಗ್ರೆಸ್​ ಪಕ್ಷ, ಬಿಜೆಪಿ ಸರ್ಕಾರವೇ ಹೊಣೆ ಎಂದು ಟ್ವೀಟ್​ ಮಾಡಿದೆ.

ಆಕ್ಸಿಜನ್ ಕೊರತೆಯಿಂದ ಸಂಭವಿಸಿದ 24 ಜನರ ಸಾವಿಗೆ ಹೊಣೆ ಯಾರು? ಇವರನ್ನು ಕಳೆದುಕೊಂಡಿರುವ ಕುಟುಂಬಕ್ಕೆ ಹೇಗೆ ಧೈರ್ಯ ತುಂಬಬೇಕು ಎಂಬುದೇ ತೋಚುತ್ತಿಲ್ಲ. ಈ ಸರ್ಕಾರ ನಂಬಿಕೆ ಕಳೆದುಕೊಂಡಿದ್ದು, ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಜನರಿಗೆ ವಾಸ್ತವಾಂಶ ತಿಳಿಸಿ ಎಂದು ಮಾಡಿಕೊಳ್ಳುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಇದು ಪ್ರಚಾರ ಪ್ರಿಯ ಸರ್ಕಾರ. ಆಕ್ಸಿಜನ್ ವಿಚಾರದಲ್ಲಿ ಯಾರೂ ಮೇಲ್ವಿಚಾರಣೆ ಮಾಡುತ್ತಿಲ್ಲ. ನಮ್ಮ ಶಾಸಕರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಬೇಕು ಎಂದು ಹೇಳಿದ್ದರು. ಅವರಿಗೆ ಮುಖ್ಯಮಂತ್ರಿಗಳು ಸಮಯಾವಕಾಶ ಕೊಟ್ಟಿದ್ದಾರೋ ಇಲ್ಲವೋ ಗೊತ್ತಿಲ್ಲ.

ಈ ಸರ್ಕಾರದಿಂದಾಗಲಿ ಮುಖ್ಯಮಂತ್ರಿಗಳಿಂದಾಗಲಿ, ಮಂತ್ರಿಗಳಿಂದಾಗಲಿ ಈ ಪರಿಸ್ಥಿತಿ ನಿಭಾಯಿಸಲು ಆಗುತ್ತಿಲ್ಲ. ಅವರ ಆದ್ಯತೆಗಳೇ ಬೇರೆ. ನಮ್ಮ ಮರ್ಯಾದೆ ಹೋದರೂ ಪರವಾಗಿಲ್ಲ, ಶಾಸಕಾಂಗ ಪಕ್ಷದ ಸಭೆ ನಂತರ ನಾನೇ ಮುಖ್ಯಕಾರ್ಯದರ್ಶಿಗಳ ಸಮಾಯಾವಕಾಶ ಕೇಳಿ ಅವರು ಎಲ್ಲಿರುತ್ತಾರೋ ಅಲ್ಲಿಗೇ ಹೋಗಿ ಭೇಟಿ ಮಾಡಿ ಈ ರಾಜ್ಯದ ಜನತೆಗೆ ವಾಸ್ತವಾಂಶ ಏನಿದೆ ಎಂದು ತಿಳಿಸಲು ಕೇಳಿಕೊಳ್ಳುತ್ತೇನೆ ಎಂದರು.

ನನಗೆ ಬರುತ್ತಿರುವ ಕರೆಗಳನ್ನು ಸ್ವೀಕರಿಸಲು ನನಗೆ ಸಾಧ್ಯವಾಗುತ್ತಿಲ್ಲ. ಅವರನ್ನು ಎಲ್ಲಿಗೆ ಕಳುಹಿಸಬೇಕು, ಯಾರನ್ನು ಸಂಪರ್ಕಿಸಬೇಕು ಎಂಬುದು ತೋಚುತ್ತಿಲ್ಲ. ಜನ ಆಕ್ಸಿಜನ್ ಮಟ್ಟದ ಕುಸಿತದಿಂದ ಆತಂಕಕ್ಕೆ ಸಿಲುಕಿದ್ದಾರೆ. ನಮಗೆ ಮುಖ್ಯಕಾರ್ಯದರ್ಶಿಗಳು, ಆರೋಗ್ಯ ಇಲಾಖೆ ಕಾರ್ಯದರ್ಶಿಗಳ ಬದ್ಧತೆ ಬಗ್ಗೆ ಪ್ರಶ್ನೆ ಇಲ್ಲ. ಆದರೆ ಜನರಿಗೆ ವಾಸ್ತವಾಂಶವನ್ನು ನೀವಾದರೂ ತಿಳಿಸಿ. ತಜ್ಞರು ಎಂದು ಇಟ್ಟುಕೊಂಡಿರುವವರು ನಂಬಿಕೆ ಕಳೆದುಕೊಳ್ಳುತ್ತಿದ್ದಾರೆ. ನಿಮ್ಮ ಕೈಯಲ್ಲಿ ಪರಿಸ್ಥಿತಿ ನಿಭಾಯಿಸಲು ಆಗದಿದ್ದರೆ ಅಧಿಕಾರ ಬಿಟ್ಟು ಹೋಗಿ ಎಂದು ಒತ್ತಾಯಿಸಿದರು.

ಈ ಸಾವುಗಳ ಹೊಣೆಯನ್ನು ಯಾರು ಹೊತ್ತುಕೊಳ್ಳುತ್ತೀರಿ ? ಇದು ಸೋಂಕಿನಿಂದಾದ ಸಾವುಗಳಲ್ಲ, ಅವ್ಯವಸ್ಥೆಯ ಸರ್ಕಾರದಿಂದಾದ ಕೊಲೆ. ಸುಧಾಕರ್ ಅವರೇ, ಸಿಡಿಗೆ ತಡೆಯಾಜ್ಞೆ ತರುವಲ್ಲಿ ತಾವು ತೋರಿದ ತುರಾತುರಿಯನ್ನು ಆಕ್ಸಿಜನ್ ವಿಚಾರದಲ್ಲಿ ತೋರದಿದ್ದಿದ್ದು ಏಕೆ? ಈ ಸಾವುಗಳ ಹೊಣೆ ನಿಮ್ಮದಲ್ಲದೆ ಇನ್ಯಾರದ್ದು? ಎಂದು ರಾಜ್ಯ ಕಾಂಗ್ರೆಸ್, ಆರೋಗ್ಯ ಸಚಿವ ಸುಧಾಕರ್ ಅವರ ಮೇಲೆ ಹರಿಹಾಯ್ದಿದೆ.

RELATED TOPICS:
English summary :DKShivakumar

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...