ಆಕ್ಸಿಜನ್ ಉತ್ಪಾದಕರು ಮತ್ತು ಸರಬರಾಜುದಾರರೊಂದಿಗೆ ಸಿಎಂ ಯಡಿಯೂರಪ್ಪ ಸಭೆ! | ಜನತಾ ನ್ಯೂಸ್
ಬೆಂಗಳೂರು : ಆಕ್ಸಿಜನ್ ಉತ್ಪಾದಕರು ಮತ್ತು ಸರಬರಾಜುದಾರರೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಭೆ ನಡೆಸಿದ್ದಾರೆ.
ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ. ಆಕ್ಸಿಜನ್ ತಯಾರಿಕೆ ಮತ್ತು ಪೂರೈಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ನೀಗಿಸಲು ಕ್ರಮ ತೆಗೆದುಕೊಳ್ಳುವ ಬಗ್ಗೆ ಚರ್ಚೆ ನಡೆಸಿದ್ದಾರೆ.
ಸಭೆಯಲ್ಲಿ ಚರ್ಚಿಸಲಾದ ಪ್ರಮುಖ ಅಂಶಗಳು
1.ಈಗ ಕೇಂದ್ರ ಸರ್ಕಾರವು ಹಂಚಿಕೆ ಮಾಡಿರುವ ಆಕ್ಸಿಜನ್ ಕೋಟಾದಲ್ಲಿ ಯಾವುದೇ ರೀತಿ ಕಡಿತವಾಗದಂತೆ ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದು.
2.ಆಕ್ಸಿಜನ್ ಟ್ಯಾಂಕರ್ ಗಳ ಫಿಲಿಂಗ್ ಅವಧಿಯನ್ನು ಕಡಿತಗೊಳಿಸಲು ಕ್ರಮ ಕೈಗೊಳ್ಳುವುದು.
3.ಆಕ್ಸಿಜನ್ ಟ್ಯಾಂಕರ್ ಗಳು ತಡೆರಹಿತ ಪ್ರಯಾಣಕ್ಕಾಗಿ ಗ್ರಿನ್ ಕಾರಿಡಾರ್ ಗಳನ್ನು ಒದಗಿಸುವುದು.
4.ಟೋಲ್ ಗಳಲ್ಲಿ ಅನಗತ್ಯ ವಿಳಂಬ ತಪ್ಪಿಸಲು ಟೋಲ್ ಗಳಿಗೆ ನಿರ್ದೇಶನ ನೀಡುವುದು.
5.ನೈಟ್ರೋಜನ್, ಆರ್ಗನ್ ಅನಿಲಗಳ ಸಾಗಣೆ ಟ್ಯಾಂಕರ್ಗಳನ್ನು ಆಕ್ಸಿಜನ್ ಸಾಗಣೆಗೆ ಪರಿವರ್ತಿಸಲು ಕ್ರಮವಹಿಸುವುದು.
6.ತುರ್ತು ಅಗತ್ಯಕ್ಕಾಗಿ ಆಕ್ಸಿಜನ್ ವಾಹನಗಳ ಚಾಲನೆಗಾಗಿ ಎಲ್ ಪಿ ಜಿ ಟ್ಯಾಂಕರ್ಗಳ ಚಾಲಕರ ಪಟ್ಟಿಯನ್ನು ಸಿದ್ಧಪಡಿಸಿಟ್ಟುಕೊಂಡು ಅಗತ್ಯವಿದ್ದಲ್ಲಿ ಅವರ ಸೇವೆಯನ್ನು ಬಳಸಿಕೊಳ್ಳುವುದು.
7.ಆಕ್ಸಿಜನ್ ಉತ್ಪಾದಕರು ಮತ್ತು ಸರಬರಾಜುದಾರರು ಆಕ್ಸಿಜನ್ ಸರಬರಾಜಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿದ್ದಲ್ಲಿ ನೇರವಾಗಿ ನಿಯೋಜಿಸಲ್ಪಟ್ಟ ಅಧಿಕಾರಿಗೆ ಸಂಪರ್ಕಿಸಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಂಡು ತಡೆರಹಿತವಾಗಿ ಆಕ್ಸಿಜನ್ ಪೂರೈಕೆ ಮಾಡಲು ಕೋರಲಾಯಿತು.