Sat,Apr27,2024
ಕನ್ನಡ / English

ಬಿಬಿಎಂಪಿ ಕರ್ಮಕಾಂಡ ಬಯಲಿಗೆಳೆದ ಸಂಸದ ತೇಜಸ್ವಿ ಸೂರ್ಯ : ಕೋವಿಡ್ ರೋಗಿಗಳ ಹಾಸಿಗೆ ಹಂಚಿಕೆಯಲ್ಲಿ ಭಾರಿ ಅವ್ಯವಹಾರ | ಜನತಾ ನ್ಯೂಸ್

04 May 2021
1413

ಬೆಂಗಳೂರು : ಕೋವಿಡ್-19 ಸಮಯದಲ್ಲಿ ಸಾವಿನ ಮನೆಯಾಗುತ್ತಿರುವ ಬೆಂಗಳೂರಿನಲ್ಲಿ ಬೆಡ್ ಬುಕಿಂಗ್ ದಂಧೆ ನಡೆಸುತ್ತಿರುವ ಬಿಬಿಎಂಪಿ ಅಧಿಕಾರಿಗಳ ಕರ್ಮಕಾಂಡವನ್ನು, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಹಾಗೂ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಬಯಲಿಗೆ ಎಳೆದಿದ್ದಾರೆ.

ಬೆಂಗಳೂರು ನಗರದಲ್ಲಿ ಸಾಕಷ್ಟು ಹಾಸಿಗೆಗಳಿವೆ, ಆದರೆ ಯುದ್ಧ ಕೊಠಡಿ ಸಿಬ್ಬಂದಿಗಳು ಸುಳ್ಳು ಹಾಸಿಗೆ ಬುಕಿಂಗ್ ದಂಧೆಯನ್ನು ನಡೆಸುತ್ತಿದ್ದಾರೆ ಮತ್ತು ನಂತರ ಅವರಿಗೆ ಇಷ್ಟವಾದವರಿಗೆ ಹಂಚಿಕೆ ಮಾಡುತ್ತಿರುವುದರಿಂದ ಅವುಗಳಲ್ಲಿ ಯಾವುದೂ ಜನರಿಗೆ ಲಭ್ಯವಾಗುತ್ತಿಲ್ಲ, ಎಂದು ಸಂಸದ ತೇಜಸ್ವಿ ಸೂರ್ಯ ಇಂದು ಪತ್ರಿಕಾಗೋಷ್ಠಿಯಲ್ಲಿ ಗಂಭೀರ ಆರೋಪ ಮಾಡಿದ್ದಾರೆ.

ಕೋಪಗೊಂಡ ಸೂರ್ಯ ಈ ದಂಧೆಯಲ್ಲಿ ಭಾಗಿಯಾಗಿರುವವರು ಕೊಲೆಗಾರರು ಎಂದು ಕಿಡಿಕಾರಿದ್ದು, ಖಂಡಿತವಾಗಿಯೂ ಇಂತವರು ಹುಳಬಿದ್ದು ಸಾಯುತ್ತಾರೆ, ಎಂದು ಹೇಳಿದ್ದಾರೆ. ಏಕೆಂದರೆ ಅವರು ಸಾಕಷ್ಟು ಲಭ್ಯವಿದ್ದರೂ ಹಾಸಿಗೆಗಳು ಸಿಗದೇ ಮರಣ ಹೊಂದಿದ ನೂರಾರು ಜನರ ಜೀವನದೊಂದಿಗೆ ಅವರು ಆಡಿದ್ದಾರೆ, ಎಂದಿದ್ದಾರೆ.

ವಿವಿಧ ಆಸ್ಪತ್ರೆಗಳಲ್ಲಿ ಬೀಡುಬಿಟ್ಟಿರುವ ಆರೋಗ ಮಿತ್ರಗಳು, ವಾರ್ ರೂಂ ನಿರ್ವಹಿಸುತ್ತಿರುವ ಏಜೆನ್ಸಿಯ ಸಿಬ್ಬಂದಿಗಳು, ಕೆಲವು ಬಿಬಿಎಂಪಿ ಅಧಿಕಾರಿಗಳು, ಜನರ ಜೀವದ ಜೊತೆ ಆಟವಾಡಿದ ಮತ್ತು ಬೆಂಗಳೂರಿನಲ್ಲಿ ಈ ಹಾಸಿಗೆಗಳ ನಕಲಿ ಕೊರತೆಗೆ ಕಾರಣವಾದ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಹಾಸಿಗೆಯ ವಿತರಣೆ, ಕಾರ್ಯವಿಧಾನ, ಪ್ರೋಟೋಕಾಲ್, ಬುಕಿಂಗ್ ಸಮಯಕ್ಕೆ ಸಂಬಂಧಿಸಿದ 10,000 ಕ್ಕೂ ಹೆಚ್ಚು ರೋಗಿಗಳನ್ನು ಒಳಗೊಂಡ ಡೇಟಾವನ್ನು ತನಿಖೆ ಮಾಡಿರುವುದಾಗಿ ಸೂರ್ಯ ಹೇಳಿದರು, ಮನೆಯಲ್ಲಿ ಪ್ರತ್ಯೇಕತೆಯಲ್ಲಿದ್ದ ರೋಗಿಗಳ ಹೆಸರುಗಳನ್ನು ಬಳಸಿ ಹಾಸಿಗೆಗಳನ್ನು ಬುಕ್ ಮಾಡಲಾಗುತ್ತಿದೆ ಮತ್ತು ಹಾಸಿಗೆ ಬೇಡಿಕೆಯಿಟ್ಟವರಿಗೆ 50 ಸಾವಿರ ರೂಪಾಯಿಗಳ ವರೆಗೆ ಹಣ ಪಡೆದು ಮರುಹಂಚಿಕೆ ಮಾಡಲಾಗಿದೆ, ಎಂದು ಹೇಳಿದ್ದಾರೆ. ಶಾಸಕರಾದ ಸತೀಶ್ ರೆಡ್ಡಿ, ಉದಯ್ ಗರುಡಾಚಾರ್ ಮತ್ತು ರವಿ ಸುಬ್ರಮಣ್ಯ ಅವರು ಸಂಸದರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಇಂತಹ ಭ್ರಷ್ಟ ಪದ್ಧತಿಗಳಿಂದ ಪ್ರಾಣ ಕಳೆದುಕೊಂಡ ಎಲ್ಲರಿಗೂ ಕ್ಷಮೆಯಾಚಿಸಿದ ಸಂಸದರು, ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರ ಗಮನಕ್ಕೆ ಈ ವಿಷಯ ತಂದಿದ್ದು, ಇದರಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ, ಎಂದು ತಿಳಿಸಿದ್ದಾರೆ.

ಇದಲ್ಲದೇ, ಈ ಅಂಕಿಅಂಶಗಳನ್ನು ಸಂಸದನಾದ ನನಗೆ ನೀಡಲು ಅಧಿಕಾರಿಗಳು ನೀಡಲು ನಿರಾಕರಿಸಿದ್ದು, ಭಾರಿ ಹರಸಾಹಸ ಪಡುವುದರ ಮೂಲಕ ಈ ಮಾಹಿತಿ ಗಳಿಸಿರುವುದಾಗಿ, ಸಂಸದರು ಹೇಳಿದ್ದಾರೆ.

RELATED TOPICS:
English summary :MP Tejasvi Surya reveals BBMP scam in alloting bed for COVID patients

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...