ಕರೋನಾ ಸೊಂಕು ನಿಯಂತ್ರಣಕ್ಕಾಗಿ ಸಂಪೂರ್ಣ ಲಾಕ್ ಡೌನ್ ಅನಿವಾರ್ಯ: ಸಂಸದೆ ಶೋಭಾ ಕರಾಂದ್ಲಾಜೆ | ಜನತಾ ನ್ಯೂಸ್
ಉಡುಪಿ : ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ, ಕೊರೋನ ಸೋಂಕು ನಿಯಂತ್ರಣಕ್ಕಾಗಿ ಕಳೆದ ಬಾರಿಯಂತೆ ಗಂಭೀರವಾಗಿ ಕರ್ಪ್ಯೂ ಮಾಡಬೇಕು ಎಂದಿದ್ದಾರೆ.
ಈಗಾಗಲೆ ಜನಾತಾ ಕಫ್ಯೂ ಜಾರಿಯಲ್ಲಿದೆ ಆದರೂ ಸಹ ಸೊಂಕು ನಿಯಂತ್ರಣಕ್ಕೆ ಬಂದಿಲ್ಲ ಕಳೆದ ಭಾರಿಯಂತೆ ಕಠಿಣ ಲಾಕ್ ಡೌನ್ ಮಾಡಿದ ರೀತಿ ಈ ಭಾರಿಯೋ ಲಾಕ್ ಡೌನ್ ಮಾಡಿದರೆ ಸೊಂಕು ನಿಯಂತ್ರಣಕ್ಕೆ ಬರಲಿದೆ ಎಂದರು.
ಜನ ಈಗಿನಂತೆ ಓಡಾಡಿದರೆ ಕೋವಿಡ್ ನಿಯಂತ್ರಣ ಸಾಧ್ಯವಿಲ್ಲ. ಮದುವೆ, ದೇವಸ್ಥಾನ ಕಾರ್ಯಕ್ರಮ, ಭೂತಾರಾಧನೆ ಎಲ್ಲವೂ ನಡೆಯುತ್ತಿದೆ. ಜನ ಹೆಚ್ಚು ಬೆರೆಯುವುದರಿಂದ ರೋಗ ಹರಡುತ್ತದೆ. ಮುಂಬೈ ಬೆಂಗಳೂರಿನಿಂದಲೂ ಜನ ಉಡುಪಿ ಜಿಲ್ಲೆಗೆ ಬರುತ್ತಿದ್ದಾರೆ. ಹೊರ ಜಿಲ್ಲೆಗಳಿಂದ ಬಂದವರಿಗೆ 15 ದಿನಗಳ ಕಟ್ಟುನಿಟ್ಟಿನ ಹೋಂ ಕ್ಚಾರಂಟೈನ್ ಕಡ್ಡಾಯ ಮಾಡಬೇಕು ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.