ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಅನಿವಾರ್ಯವಾಗಬಹುದು - ಸಿಎಂ ಬಿಎಸ್ವೈ | ಜನತಾ ನ್ಯೂಸ್
ಬೆಂಗಳೂರು : ಜನತಾ ಕರ್ಫ್ಯೂ ವನ್ನು ಯಾರು ಸರಿಯಾಗಿ ಪಾಲಿಸುತ್ತಿಲ್ಲ. ನಾವು ಕೊಡೋ ಎಚ್ಚರಿಕೆಯನ್ನೂ ಪಾಲಿಸುತ್ತಿಲ್ಲ ಅದಕ್ಕಾಗಿ ಲಾಕ್ ಡೌನ್ ಅನಿವಾರ್ಯವಾಗಬಹುದು, ಎಂದು ಮುಖ್ಯಮಂತ್ರಿ ಬಿಎಸ್ಯಡಿಯೂರಪ್ಪ ಹೇಳಿದ್ದಾರೆ.
ಒಂದೆರಡು ದಿನಗಳಲ್ಲಿ ಕರ್ನಾಟಕದಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆಯ ಸುಳಿವನ್ನು ಮುಖ್ಯಮಂತ್ರಿ ನೀಡಿದ್ದಾರೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮೇ 10 ರಿಂದ 25 ರವರೆಗೆ ಕರ್ನಾಟಕ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡುವ ಸಾಧ್ಯತೆಗಳಿವೆ.
ಇಂದು ನಗರದ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ನಾಳೆ ಅಧಿಕಾರಿಗಳ ಜೊತೆ ಕುರಿತು ಚರ್ಚೆ ಮಾಡುತ್ತೇವೆ ಇನ್ನು ಬಿಗಿಯಾದ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ ಇನ್ನೊಂದೆರಡು ದಿನಗಳಲ್ಲಿ ಯಾವ ರೀತಿ ಕ್ರಮ ಕೈಗೊಳ್ಳಬೇಕೆಂದು ಇದರ ಬಗ್ಗೆ ತಿರ್ಮಾನ ಆಗಲಿದೆ. ಇಂದು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಯಡಿಯೂರಪ್ಪ ಅವರು ದೇಶದ ಎಲ್ಲಾ ಜನ ನೆಮ್ಮದಿಯಿಂದ ಬದುಕುವಂತೆ ಕಾಲ ಬರಲಿ ಎಂದು ತಾಯಿಯಲ್ಲಿ ಬೇಡಿಕೊಂಡು ಇರುವುದಾಗಿ ಹೇಳಿದ್ದಾರೆ. ಜನತಾ ಕರ್ಫ್ಯೂ ವನ್ನು ಯಾರು ಸರಿಯಾಗಿ ಪಾಲಿಸುತ್ತಿಲ್ಲ. ನಾವು ಕೊಡೋ ಎಚ್ಚರಿಕೆಯನ್ನೂ ಪಾಲಿಸುತ್ತಿಲ್ಲ ಅದಕ್ಕಾಗಿ ಲಾಕ್ ಡೌನ್ ಅನಿವಾರ್ಯವಾಗಬಹುದು, ಎಂದು ಸಿಎಂ ಬಿಎಸ್ವೈ ಹೇಳಿದ್ದಾರೆ.
ಇನ್ನೂ ಬಿಗಿ ಕ್ರಮವನ್ನು ಕೈಗೊಳ್ಳಬಾರದು ಎಂದಾಗಿದ್ದರೆ, ಜನರು ಮಾಸ್ಕ ಧರಿಸಿ ಅಂತರವನ್ನು ಕಾಯ್ದುಕೊಂಡು ಸಹಕಾರವನ್ನು ಜನರು ನೀಡಬೇಕು. ಇಲ್ಲವಾದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ, ಅದನ್ನು ನಾನು ಮಾಡುತ್ತೇನೆ, ಎಂದು ಮುಖ್ಯಮಂತ್ರಿಯವರು ಎಚ್ಚರಿಕೆ ರವಾನಿಸಿದ್ದಾರೆ.
ನಾಳೆ ಸಿಎಂ ಬಿಎಸ್ವೈ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ಜೊತೆಗೆ ಮಹತ್ವದ ಸಭೆಯಲ್ಲಿ ಲಾಕ್ ಡೌನ್ ಕುರಿತು ತೀರ್ಮಾನ ಕೈಗೊಳ್ಳುವುದು ಬಹುತೇಕ ಖಚಿತ ವಾಗಿದೆ. ಇನ್ನೂ ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ 15 ದಿನ ಲಾಕ್ ಡೌನ್ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಘೋಷಣೆ ಬಾಕಿ ಇದೆ.
ಸೋಮವಾರದಿಂದ 15 ದಿನಗಳ ಕಾಲ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಲಿದ್ದು, ಪ್ಯಾಕೇಜ್, ನೆರವು ಬಗ್ಗೆ ಹಂತ ಹಂತವಾಗಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.