ಐಎನ್ಎಸ್ ವಿಕ್ರಮಾದಿತ್ಯ ಯುದ್ಧ ನೌಕೆಯಲ್ಲಿ ಬೆಂಕಿ, ತಪ್ಪಿದ ಅನಾಹುತ! | ಜನತಾ ನ್ಯೂಸ್
ಕಾರವಾರ : ಭಾರತೀಯ ನೌಕಾಪಡೆಯ ಬೃಹತ್ ಯದ್ದ ವಿಮಾನ ವಾಹಕ ನೌಕೆ ಐಎನ್ಎಸ್ ವಿಕ್ರಮಾದಿತ್ಯ (ಏರ್ಕ್ರಾಪ್ಟ್ ಕ್ಯಾರಿಯರ್) ದಲ್ಲಿ ಶನಿವಾರ ಬೆಳಗಿನ ಜಾವ ಆಗ್ನಿ ಅವಘಡ ಸಂಭವಿಸಿದೆ.
ಹಡಗಿನ ಒಂದು ಭಾಗದಿಂದ ಹೊಗೆ ಹೊರಹೊಮ್ಮುತ್ತಿರುವುದನ್ನು ಕರ್ತವ್ಯದಲ್ಲಿರುವ ಸಿಬ್ಬಂದಿ ಗಮನಿಸಿದರು ಮತ್ತು ಅದನ್ನು ನಂದಿಸಲು ತ್ವರಿತವಾಗಿ ಕಾರ್ಯನಿರ್ವಹಿಸಿದರು. ಯಾವುದೇ ದೊಡ್ಡ ಹಾನಿಯಾಗಿಲ್ಲ ಎಂದು ಭಾರತೀಯ ನೌಕಾಪಡೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಕಮಾಂಡರ್ ಮೆಹುಲ್ ಕಾರ್ಣಿಕ್ ಹೇಳಿದರು.
ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯುದ್ಧ ನೌಕೆಯಲ್ಲಿದ್ದ ಎಲ್ಲಾ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಯಾವುದೇ ದೊಡ್ಡ ಪ್ರಮಾಣದ ಹಾನಿ ಬಗ್ಗೆ ವರದಿಯಾಗಿಲ್ಲ ಎಂದು ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.
ಅಗ್ನಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಐಎನ್ಎಸ್ ವಿಕ್ರಮಾದಿತ್ಯದಲ್ಲಿ ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ.