ಕೊರೊನಾ ಪಾಸಿಟಿವ್ ಎಂದು ಸೋಂಕಿಗೆ ಹೆದರಿದ ವ್ಯಕ್ತಿ ಕೆರೆಗೆ ಹಾರಿ ಆತ್ಮಹತ್ಯೆ! | ಜನತಾ ನ್ಯೂಸ್
ಮೈಸೂರು : ಕೋವಿಡ್ 19 ಸೋಂಕಿಗೆ ಹೆದರಿ ವ್ಯಕ್ತಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ರವಿವಾರ ನಡೆದಿದೆ.
ಸಿದ್ದಾರ್ಥ ಲೇಔಟ್ನಲ್ಲಿ ವಾಸವಾಗಿದ್ದ ಶಿವನಂಜೇಗೌಡ (65) ಕೆರೆಗೆ ಹಾರಿದ ವ್ಯಕ್ತಿ. ಇವರು ಮೂಲತಃ ತಿ. ನರಸೀಪುರ ತಾಲೂಕಿನ ಬನ್ನೂರು ಹೋಬಳಿಯ ಗೊರವನಹಳ್ಳಿ ನಿವಾಸಿಯಾಗಿದ್ದು, 4 ದಿನಗಳ ಹಿಂದೆ ಕೊರೊನಾ ಸೋಂಕು ತಗುಲಿ ಹೋಮ್ ಐಸೋಲೇಶನ್ನಲ್ಲಿದ್ದರು.
ಕೊರೊನಾ ಸೋಂಕು ದೃಢಪಟ್ಟಿದ್ದಕ್ಕೆ ಹೆದರಿ ವರುಣಾ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವರುಣಾ ಪೊಲೀಸ್ ಠಾಣೆಯ ಪಿಎಸ್ಐ ಲಕ್ಷ್ಮಿ. ಆರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಾರ್ವಜನಿಕರು ವರುಣ ಕೆರೆಯ ಸುತ್ತಮುತ್ತ ಸುಳಿದಾಡದಂತೆ ಪೊಲೀಸರು ಮನವಿ ಮಾಡಿದ್ದಾರೆ.
RELATED TOPICS:
English summary :Mysuru