ತಲೆಗೆ ಶೂಟ್ ಮಾಡಿಕೊಂಡು ನಿವೃತ್ತ ಉಪತಹಶೀಲ್ದಾರ್ ಆತ್ಮಹತ್ಯೆ! ಡೆತ್ನೋಟ್ನಲ್ಲಿದೆ ರಹಸ್ಯ | ಜನತಾ ನ್ಯೂಸ್
ಚಿಕ್ಕಮಗಳೂರು : ನಿವೃತ ಡೆಪ್ಯುಟಿ ತಹಸೀಲ್ದಾರ್ವೊಬ್ಬರು ಕಾರಿನಲ್ಲಿ ಕುಳಿತುಕೊಂಡೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತರೀಕೆರೆ ತಾಲೂಕಿನ ಬೇಲೆನಹಳ್ಳಿ ತಾಂಡ್ಯದಲ್ಲಿ ಸಂಭವಿಸಿದೆ.
ಸೋಮನಾಯ್ಕ(72) ಆತ್ಮಹತ್ಯೆ ಮಾಡಿಕೊಂಡವರು. ಅವರು ಬಂದೂಕಿನಿಂದ ತಲೆಗೆ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇಂದು ಮುಂಜಾನೆ ಕಾರಿನಲ್ಲಿ ತೋಟಕ್ಕೆ ಬಂದ ಸೋಮನಾಯ್ಕ ಅವರು ತೋಟದ ಕೋವಿಯಿಂದ ಗುಂಡು ಹಾರಿಸಿಕೊಂಡು ಸತ್ತಿದ್ದಾರೆ. ಕಾರಿನಲ್ಲಿ ಡೆತ್ನೋಟ್ ಸಿಕ್ಕಿದೆ.
ಸೋಮನಾಯ್ಕ ಅವರಿಗೂ ಕರೊನಾ ಪಾಸಿಟಿವ್ ಬಂದಿತ್ತು. ತನ್ನಿಂದ ಮನೆಮಂದಿಗೆಲ್ಲಾ ಕೋವಿಡ್ ಸೋಂಕು ಹರಡಬಹುದು ಎನ್ನುವ ಭಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಉಲ್ಲೇಖಿಸಿದ್ದಾರೆ.
ಸ್ಥಳಕ್ಕೆ ತರೀಕೆರೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸತ್ತಿದ್ದಾರೆ