ಕೊರೋನಾ ರೋಗಿಗಳ ಆರೈಕೆಗಾಗಿ ಆಕ್ಸಿಬಸ್ ಸೇವೆಗೆ ಚಾಲನೆ ನೀಡಿದ ಸಿಎಂ ಯಡಿಯೂರಪ್ಪ | ಜನತಾ ನ್ಯೂಸ್
ಬೆಂಗಳೂರು : ತುರ್ತು ಸಂದರ್ಭಗಳಲ್ಲಿ ಕೋವಿಡ್ -19 ರೋಗಿಗಳಿಗೆ ಸಹಾಯ ಮಾಡಲು ಮುಖ್ಯಮಂತ್ರಿಗಳು ಆಕ್ಸಿಬಸ್ ಸೇವೆಯನ್ನು ಪ್ರಾರಂಭಿಸಿದರು.
ಬೆಂಗಳೂರಿನಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳು ಏರುತ್ತಲಿದ್ದು, ಈ ಹಿನ್ನೆಲೆ ಇಂದು ಸ್ವತಃ ಕಾರ್ಯಾಚರಣೆಗಿಳಿದ ಸಿಎಂ ಯಡಿಯೂರಪ್ಪ ಬಿಬಿಎಂಪಿ ವಾರ್ ರೂಮ್ ಗೆ ಭೇಟಿ ನೀಡಿ ಬೆಡ್ ಗಳ ಹಂಚಿಕೆ ಕುರಿತು ಪರಿಶೀಲನೆ ನಡೆಸಿದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ, ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತಿತರ ಅಧಿಕಾರಿಗಳು ಮಲ್ಲೇಶ್ವರಂನ ಬಿಬಿಎಂಪಿ ವಾರ್ ರೂಮ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಆರೋಗ್ಯ ಸೌಧದಲ್ಲಿರುವ ವಾರ್ ರೂಮ್ ಗೆ ಭೇಟಿ ನೀಡಿದ ಯಡಿಯೂರಪ್ಪ ಅಧಿಕಾರಿಗಳ ಬಳಿ ಕೊರೋನ ನಿಯಂತ್ರಣಕ್ಕೆ ತೆಗೆದುಕೊಂಡ ವಿಚಾರಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. ಆಸ್ಪತ್ರೆಗಳಲ್ಲಿನ ಬೆಡ್ ಗಳ ಸ್ಥಿತಿ, ಆಮ್ಲಜನಕದ ಲಭ್ಯತೆ ಮತ್ತು ಸಾಂಕ್ರಾಮಿಕ ರೋಗಕ್ಕೆ ಅಗತ್ಯವಾದ ಇತರ ಔಷಧಿಗಳ ಬಗ್ಗೆ ಮಾಹಿತಿ ನೀಡಿದ್ದಾರೆ.
ಕೋವಿಡ್ ವಾರ್ ರೂಮ್ಮನೆಯಲ್ಲಿ ಚಿಕಿತ್ಸೆ ಪಡೆಯಬಹುದಾದ ರೋಗಿಗಳ ಬಗ್ಗೆ ಮಾಹಿತಿಯನ್ನು ಒದಗಿಸಿದೆ ,ಆದರೆ ಗಂಭೀರ ಸ್ಥಿತಿಯಲ್ಲಿರುವ ರೋಗಿಗಳಿಗೆ ಚಿಕಿತ್ಸೆ ಪಡೆಯಲ್ಲು ಆಸ್ಪತ್ರೆಗಳಿಗೆ ಕಳಿಸಲಾಗಿದೆ ಎಂದು ಸಿಎಂ ಹೇಳಿದರು.
ಪ್ರತಿ ತಾತ್ಕಾಲಿಕ ಆಕ್ಸಿಬಸ್ 8 ರೋಗಿಗಳಿಗೆ ನೆರವಾಗಲಿದೆ. ಅಂತಹ 20 ಬಸ್ ಗಳನ್ನು ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳು ಮತ್ತು ಚಿಕಿತ್ಸಾ ಕೇಂದ್ರಗಳ ಬಳಿ ಇರಿಸಲಾಗುವುದು ಅಲ್ಲದೆ ರಾಜ್ಯದಾದ್ಯಂತ ಹೆಚ್ಚಿನ ಸಂಖ್ಯೆಯ ಬಸ್ ಗಳನ್ನು ಇರಿಸಲಾಗುವುದು ಎಂದರು .
ಗಂಭೀರ ಸ್ವರೂಪದ ರೋಗಲಕ್ಷಣಗಳಿರುವ ರೋಗಿಗಳಿಗೆ ಚಿಕಿತ್ಸೆ ಪಡೆಯಲು ದಾರಿ ಮಾಡಿಕೊಡಿ ಅನಗತ್ಯವಾಗಿ ಆಸ್ಪತ್ರೆಗಳಲ್ಲಿ ಹೆಚ್ಚು ಕಾಲ ಉಳಿದಿರುವ ಕೋವಿಡ್ ರೋಗಿಗಳು ಮನೆಗೆ ತೆರಳಿ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಂಗಳವಾರ ಮನವಿ ಮಾಡಿದ್ದಾರೆ.