Fri,Apr26,2024
ಕನ್ನಡ / English

ಬಿಜೆಪಿಗರು ಗುಲಾಮಗಿರಿ ಬಿಡಬೇಕು, ರಾಜ್ಯದ ವಿಚಾರದಲ್ಲಿ ತಾತ್ಸಾರ ಮಾಡಿದರೆ ಜನ ದಂಗೆ ಎದ್ದಾರು | ಜನತಾ ನ್ಯೂಸ್

13 May 2021
1445

ಬೆಂಗಳೂರು : ಕೋರ್ಟ್‌ ಆದೇಶದ ನಂತರವೂ ಆಮ್ಲಜನಕ ಪೂರೈಕೆ ವಿಚಾರದಲ್ಲಿ ತಾರತಮ್ಯ ಎಸಗಿರುವ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಕೇಂದ್ರ ಸರ್ಕಾರ ತಾರತಮ್ಯ ಬಿಟ್ಟು ಕರ್ನಾಟಕದ ಅಗತ್ಯವನ್ನು ಪೂರೈಸಬೇಕು. ತಾನು ಸರ್ವಶಕ್ತ ಆಡಳಿತ ನಡೆಸುತ್ತಿರುವ ದಿಮಾಕನ್ನು ಕೇಂದ್ರ ಬಿಡಬೇಕು. ಒಕ್ಕೂಟ ಸರ್ಕಾರ ನಡೆಸುತ್ತಿರುವ ವಾಸ್ತವ ಅರಿಯಬೇಕು. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪಕ್ಷದ ತಪ್ಪನ್ನು ಇಲ್ಲಿ ಸಮರ್ಥಿಸಿಕೊಳ್ಳುತ್ತಿರುವವರು ಮೊದಲು ತಾವು ಕನ್ನಡಿಗರು ಎಂಬುದು ಅರಿಯಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ರ್ನಾಟಕಕ್ಕೆ ನಿತ್ಯ 1200 ಮೆಟ್ರಿಕ್‌ ಟನ್‌(MT) ಆಮ್ಲಜನಕ ಪೂರೈಸಬೇಕು ಎಂಬ ಕೋರ್ಟ್‌ ಆದೇಶದ ನಂತರವೂ ಕೇಂದ್ರ ರಾಜ್ಯಕ್ಕೆ ಪೂರೈಸಿದ್ದು 120MT ಮಾತ್ರ. ಅತ್ತ, ನಮಗಿಂತ ಕಡಿಮೆ ಪ್ರಕರಣಗಳಿರುವ ಉತ್ತರ ಪ್ರದೇಶಕ್ಕೆ 1680MT ಪೂರೈಸಿರುವ ಕೇಂದ್ರ ಸರ್ಕಾರ ತಾರತಮ್ಯದಲ್ಲಿ ಪಾರಮ್ಯ ಮೆರೆದಿದೆ. ಈ ಒಕ್ಕೂಟದಲ್ಲಿ ಕನ್ನಡಿಗರೇನು ತಬ್ಬಲಿ ಮಕ್ಕಳೇ? ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕದ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿರುವುದು ಸರ್ಕಾರವೇ ನೀಡಿರುವ ಅಂಕಿ ಅಂಶಗಳಿಂದ ಬಯಲಾಗಿದೆ. ಕರ್ನಾಟಕ, ಕನ್ನಡಿಗರ ವಿಚಾರದಲ್ಲಿ ಕೇಂದ್ರಕ್ಕೆ ಈ ಮಟ್ಟಿಗಿನ ತಾತ್ಸಾರ ಏಕೆ? ಇಲ್ಲಿ ಬಿಜೆಪಿಯದ್ದೇ ಸರ್ಕಾರ ಇರುವುದಕ್ಕೋ? ಅತಿ ಹೆಚ್ಚು ಸಂಸದರು ಆಯ್ಕೆಯಾಗಿರುವುದಕ್ಕೋ? ಅಥವಾ ಯಡಿಯೂರಪ್ಪರನ್ನು ಖಳನಾಯಕರಾಗಿಸಲೋ? ಎಂದು ಪ್ರಶ್ನಿಸಿರುವ ಎಚ್‌ಡಿಕೆ, ಕರ್ನಾಟಕದ ವಿಚಾರದಲ್ಲಿ ಹೇಳತೀರದ ತಾರತಮ್ಯ ಮಾಡುತ್ತಿರುವ ಕೇಂದ್ರ ಸರ್ಕಾರ ಒಂದು ವಿಷಯ ಸ್ಪಷ್ಟವಾಗಿ ಅರಿಯಬೇಕು.

ಇದು ಒಕ್ಕೂಟ ವ್ಯವಸ್ಥೆ. ಒಕ್ಕೂಟ ಸರ್ಕಾರ ನಡೆಸುತ್ತಿರುವವರು ಎಲ್ಲ ರಾಜ್ಯಗಳಿಗೂ ಸಮಾನ ಆದ್ಯತೆ ನೀಡಬೇಕು. ಅನಿವಾರ್ಯದಲ್ಲಿರುವವರ ಅಗತ್ಯಗಳನ್ನು ಮೊದಲು ಪೂರೈಸಬೇಕು. ಅದನ್ನು ಬಿಟ್ಟು ತಾತ್ಸಾರ ಮಾಡಿದರೆ ಜನ ದಂಗೆ ಎದ್ದಾರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲಸಿಕೆ ವಿಚಾರದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯವರೇ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. 3ಕೋಟಿ ಲಸಿಕೆಗೆ ಕೇಳಿದ್ದೇವೆ. 7 ಲಕ್ಷ ಡೋಸ್‌ ಸಿಕ್ಕಿದೆ. ಎರಡನೇ ಡೋಸ್‌ ಪಡೆಯುವವರಿಗೆ ಮಾತ್ರ ಆದ್ಯತೆ. ಮೊದಲ ಡೋಸ್‌ ಪಡೆಯುವವರು ಕಾಯಬೇಕು, ಎಂದಿದ್ದಾರೆ. ಲಸಿಕೆಯ ವಿಚಾರದಲ್ಲಿಯೂ ಕೇಂದ್ರ ತಾರತಮ್ಯ ಮಾಡುತ್ತಿರುವುದು ಇದರಿಂದ ಸ್ಪಷ್ಟವಾಗಿದೆ ಎಂದಿರುವ ಕುಮಾರಸ್ವಾಮಿ, ಬಿಜೆಪಿಯ ಪ್ರತಿಯೊಂದು ಧೋರಣೆಯನ್ನೂ ಬೆಂಬಲಿಸುವವರು, ಸಮರ್ಥಿಸಿಕೊಳ್ಳುತ್ತಿರುವವರು, ವಿರೋಧ ಪಕ್ಷಗಳ ನ್ಯಾಯಯುತ ಸಲಹೆ, ಬೇಡಿಕೆಗಳನ್ನು ಅಡಿಗಡಿಗೂ ಟೀಕಿಸುವವರು ಕರ್ನಾಟಕಕ್ಕೆ, ಕನ್ನಡಿಗರಿಗೆ ಆಗುತ್ತಿರುವ ಈ ಅನ್ಯಾಯವನ್ನು ಸಮರ್ಥಿಸಿಕೊಳ್ಳುವರೇ? ಆಮ್ಲಜನಕವಿಲ್ಲದೇ ಪ್ರಾಣ ಕಳೆದುಕೊಳ್ಳುತ್ತಿರುವ ಕನ್ನಡಿಗರ ಸಾವಿನ ಹೊಣೆಯನ್ನು ಹೊರುವರೇ? ಎಂದು ಪ್ರಶ್ನಿಸಿದ್ದಾರೆ.

RELATED TOPICS:
English summary :HD Kumaraswamy

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...