ನಿಮ್ಮ ಪಾಪದ ಸಂಪಾದನೆಯಲ್ಲಿ ಲಸಿಕೆ ಹಾಕಿಸಿಕೊಳ್ಳಬೇಕಾದ ಅನಿವಾರ್ಯತೆ ರಾಜ್ಯದ ಜನತೆಗೆ ಬಂದಿಲ್ಲ! | ಜನತಾ ನ್ಯೂಸ್
ಬೆಂಗಳೂರು : ಜನರಿಗೆ ಉಚಿತ ಲಸಿಕೆ ಕೊಡಲು ಸರ್ಕಾರಕ್ಕೆ ಸಾಧ್ಯವಾಗದಿದ್ದರೆ ಹೇಳಲಿ, ನಾವು ಸಹಾಯ ಮಾಡುತ್ತೇವೆ ಎಂದಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ ಬಿಜೆಪಿ ತಿರುಗೇಟು ನೀಡಿದೆ.
ಉಚಿತ ಲಸಿಕೆ ಕೊಡಲು ಸರ್ಕಾರಕ್ಕೆ ಸಾಧ್ಯವಾಗದಿದ್ದರೆ ಹೇಳಲಿ, ನಾವು ಸಹಾಯ ಮಾಡುತ್ತೇವೆ ಎಂದಿರುವ ಡಿಕೆ ಶಿವಕುಮಾರ್ ಅವರೇ, ಲಸಿಕೆ ಬಗ್ಗೆ ಅಪಪ್ರಚಾರ ಮಾಡಿದಷ್ಟು ಸುಲಭವಾಗಿ ಸಹಾಯ ಮಾಡಲು ಸಾಧ್ಯವಿಲ್ಲ. ಅಷ್ಟಕ್ಕೂ ನಿಮ್ಮ ಪಾಪದ ಸಂಪಾದನೆಯಲ್ಲಿ ಲಸಿಕೆ ಹಾಕಿಸಿಕೊಳ್ಳಬೇಕಾದ ಅನಿವಾರ್ಯತೆ ರಾಜ್ಯದ ಜನತೆಗೆ ಬಂದಿಲ್ಲ ಎಂದು ಬಿಜೆಪಿ ಟ್ವೀಟ್ ಮೂಲಕ ಹರಿಹಾಯ್ದಿದ್ದಾರೆ.
ಸಂಕಷ್ಟದ ಸಮಯದಲ್ಲಿಬಿಟ್ಟಿ ಸಲಹೆ ನೀಡುವುದು, ಜನರ ದಾರಿ ತಪ್ಪಿಸುವುದು. ಇದು ಕಾಂಗ್ರೆಸ್ ಜನರಿಗೆ ಮಾಡುತ್ತಿರುವ ದ್ರೋಹ. ಭ್ರಷ್ಟಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೇ, ನಿಮಗೆ ನಿಜಕ್ಕೂ ಸಹಾಯ ಮಾಡುವ ಮನಸಿದ್ದರೆ ಪೊಳ್ಳು ಆರೋಪ ಮಾಡುವುದನ್ನು ಬಿಟ್ಟು ಒಂದಿಷ್ಟು ಸುಮ್ಮನಿದ್ದು ಬಿಡಿ ಎಂದು ಸಲಹೆ ನೀಡಿದೆ.
ಸರ್ಕಾರಕ್ಕೆ ಸವಾಲೆಸೆಯುವ ನೀವು, ರಾಜೀವ್ ಗಾಂಧಿ ಫೌಂಡೇಶನ್ ಖಾತೆಯಲ್ಲಿ ಲಕ್ಷಾಂತರ ಕೋಟಿ ಹಣ ಕೊಳೆಯುತ್ತಿದೆ. ನಿಮ್ಮ ಆದಾಯ ಮೀರಿದ ಆಸ್ತಿಯ ತನಿಖೆ ನಡೆಯುತ್ತಿದೆ. ಇದ್ಯಾವುದೂ ನ್ಯಾಯ ಮಾರ್ಗದ ಗಳಿಕೆಯಲ್ಲ. ಸಹಾಯದ ಹೆಸರಿನಲ್ಲೂ ಕಪ್ಪು ಬಿಳುಪು ದಂಧೆಗೆ ಇಳಿದಿದ್ದೀರಾ?, ಉಚಿತ ಲಸಿಕೆಗೆ ನಾವು ಸಹಾಯ ಮಾಡುತ್ತೇವೆ ಎಂದು ನೀವು ಹೇಳಿದಾಗಲೇ ಅತ್ತೆಯ ದುಡ್ಡನ್ನು ಅಳಿಯನಿಗೆ ದಾನ ಮಾಡುವ ಚಿಲ್ಲರೆ ಯೋಜನೆ ರೂಪಿಸುತ್ತಿರಬಹುದೆಂಬ ಶಂಕೆಯಿತ್ತು. ಈಗ 100 ಕೋಟಿ ನೀಡುವ ಘೋಷಣೆ ಮಾಡಿದ್ದಾರೆ. ಇದು ಜನರ ದಾರಿ ತಪ್ಪಿಸುವ ಕಾಂಗ್ರೆಸ್ನ ಮತ್ತೊಂದು ಯೋಜನೆಯಷ್ಟೇ ಎಂದು ಬಿಜೆಪಿ ಕಿಡಿಕಾರಿದೆ.
ಕೊರೋನಾ ಸೋಂಕಿನ ಆರ್ಭಟದ ನಡುವೆಯೂ ಲಸಿಕೆ ನೀಡೋದಕ್ಕೂ ಕೊರತೆ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ರಾಜ್ಯ ಸರ್ಕಾರಕ್ಕೆ ನೆರವಿನ ಸಹಾಯ ಹಸ್ತ ಚಾಚಿದೆ. ಕೊರೋನಾ ಲಸಿಕೆ ಖರೀದಿಗಾಗಿ 100 ಕೋಟಿ ಸಹಾಯ ನೀಡೋದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಉಚಿತ ಲಸಿಕೆ ಕೊಡಲು ಸರ್ಕಾರಕ್ಕೆ ಸಾಧ್ಯವಾಗದಿದ್ದರೆ ಹೇಳಲಿ, ನಾವು ಸಹಾಯ ಮಾಡುತ್ತೇವೆ ಎಂದಿರುವ @DKShivakumar ಅವರೇ,
— BJP Karnataka (@BJP4Karnataka) May 14, 2021
ಲಸಿಕೆ ಬಗ್ಗೆ ಅಪಪ್ರಚಾರ ಮಾಡಿದಷ್ಟು ಸುಲಭವಾಗಿ ಸಹಾಯ ಮಾಡಲು ಸಾಧ್ಯವಿಲ್ಲ.
ಅಷ್ಟಕ್ಕೂ ನಿಮ್ಮ ಪಾಪದ ಸಂಪಾದನೆಯಲ್ಲಿ ಲಸಿಕೆ ಹಾಕಿಸಿಕೊಳ್ಳಬೇಕಾದ ಅನಿವಾರ್ಯತೆ ರಾಜ್ಯದ ಜನತೆಗೆ ಬಂದಿಲ್ಲ.
1/6#ಜನವಿರೋಧಿಕಾಂಗ್ರೆಸ್