ಇನ್ನೆರಡು ದಿನದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಬೇಕಿದ್ದ ಯುವಕ ಕೋವಿಡ್ನಿಂದ ಸಾವು | ಜನತಾ ನ್ಯೂಸ್
ಮೈಸೂರು : ಇನ್ನೆರಡು ದಿನದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಬೇಕಿದ್ದ ಯುವಕ ಕೋವಿಡ್ನಿಂದ ಸಾವಿಗೀಡಾಗಿರುವ ಘಟನೆ ನಗರದಲ್ಲಿ ನಡೆದಿದೆ.
ನಗರದ ಹೆಬ್ಬಾಳು ನಿವಾಸಿ ನವೀನ್ (31) ಮೃತಪಟ್ಟ ಯುವಕ. ಈತ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದ. ಮೇ 19 ಮತ್ತು 20ಕ್ಕೆ ಮದುವೆ ದಿನಾಂಕ ನಿಗದಿಯಾಗಿತ್ತು.
ಕೆಮ್ಮು ಕಾಣಿಸಿಕೊಂಡ ಕಾರಣ ನವೀನ್ ಕೋವಿಡ್ ಪರೀಕ್ಷೆಗೆ ಒಳಗಾದಾಗ ಸೋಂಕಿರುವುದು ದೃಢಪಟ್ಟಿತ್ತು. ಬಳಿಕ ಉಸಿರಾಟದ ತೊಂದರೆಯಿಂದಾಗಿ ಜಿಲ್ಲಾ ಕೊವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನವೀನ್ ಮೃತಪಟ್ಟಿದ್ದಾರೆ. ಮೃತ ನವೀನ್ ಅಣ್ಣ-ಅತ್ತಿಗೆಗೂ ಪಾಸಿಟಿವ್ ವರದಿ ಬಂದಿದೆ.
RELATED TOPICS:
English summary :Mysuru