ಕೆಂಗೇರಿ ಬಳಿ 205 ಬೆಡ್ಗಳ ಕೊವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ! | ಜನತಾ ನ್ಯೂಸ್
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ 205 ಬೆಡ್ಗಳ ಕೊವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಿದ್ದಾರೆ.
ಕೆಂಗೇರಿ ಬಳಿಯ ಬಿಜಿಎಸ್ ಗ್ಲೋಬಲ್ ಮೆಡಿಕಲ್ ಕಾಲೇಜಿನಲ್ಲಿ ಆಕ್ಸಿಜನ್, ವೆಂಟಿಲೇಟರ್ ಮತ್ತು ಸಾಮಾನ್ಯ ಬೆಡ್ಗಳಿರುವ 205 ಹಾಸಿಗೆಗಳ ಕೊವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಲಾಗಿದೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ಬಿಜಿಎಸ್ ಗ್ಲೋಬಲ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಂಡ್ ಹಾಸ್ಪಿಟಲ್ ವತಿಯಿಂದ ಕೆಂಗೇರಿಯಲ್ಲಿರುವ ಬಿಜಿಎಸ್ ಮೆಡಿಕಲ್ ಕಾಲೇಜ್ ನಲ್ಲಿ 210 ಆಕ್ಸಿಜಿನೇಟೆಡ್ ಹಾಸಿಗೆಗಳು, 43 ICU ಹಾಸಿಗೆಗಳು, 30 HDU ಹಾಸಿಗೆಗಳು, 100 ಸಾಮಾನ್ಯ ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಉದ್ಘಾಟಿಸಿದರು.
ನಂತರ, ಮೈಸೂರಿನ ಹಸಿರು ಪ್ರತಿಷ್ಠಾನದ ವತಿಯಿಂದ ಎರಡು ಸಾವಿರ ಸಸಿಗಳನ್ನು ಶ್ರೀ ಆದಿಚುಂಚನಗಿರಿ ಮಠಕ್ಕೆ ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಸಿಎಂ ಪಾಲ್ಗೊಂಡರು. ಮೆಡಿಕಲ್ ಕಾಲೇಜು ಆವರಣದಲ್ಲಿ ಸಿಎಂ ಯಡಿಯೂರಪ್ಪ, ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಗಿಡ ನೆಟ್ಟಿದ್ದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಈ ಶುಭ ಸಮಯದಲ್ಲಿ ಉಪಸ್ಥಿತರಿದ್ದರು.