ಆಂಧ್ರದಿಂದ ಗಾಂಜಾ ತಂದು ಬೆಂಗಳೂರಲ್ಲಿ ಮಾರ್ತಿದ್ದ ಆರೋಪಿ ಬಂಧನ | ಜನತಾ ನ್ಯೂಸ್
ಬೆಂಗಳೂರು : ಈ ಲಾಕ್ಡೌನ್ ವೇಳೆ ಅಗತ್ಯ ವಸ್ತುಗಳ ಸಾಗಾಣಿಕೆಗೆ ಅವಕಾಶ ನೀಡಲಾಗಿದ್ದು, ಇದನ್ನೇ ಅವಕಾಶ ಮಾಡಿಕೊಂಡ ಭೂಪ ಆಂಧ್ರದಿಂದ ಗೂಡ್ಸ್ ವಾಹನದಲ್ಲಿ ಗಾಂಜಾ ತರಿಸಿದ್ದಾನೆ.
ರಾಮಮೂರ್ತಿ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಸುಬ್ಬಾರೆಡ್ಡಿ ಎಂಬ ಬಂಧಿತ ಆರೋಪಿಯಿಂದ 6 ಲಕ್ಷ ಮೌಲ್ಯದ 20 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ.
ಬಂಧಿತನಿಂದ 6 ಲಕ್ಷ ಮೌಲ್ಯದ 20 ಕೆಜಿ ಗಾಂಜಾ, 1 ಕಾರನ್ನ ವಶಕ್ಕೆ ಪಡೆದಿದ್ದಾರೆ. ಆಂಧ್ರಪ್ರದೇಶದ ವಿಶಾಖಪಟ್ಟಣಂನಿಂದ ಗಾಂಜಾ ಖರೀದಿ ಮಾಡಿ, ತನ್ನ ದ್ವಿಚಕ್ರ ವಾಹನದಲ್ಲಿ ಗಾಡಿ ಸ್ಟೆಪ್ನಿ ಇರಿಸುವ ಸ್ಥಳ, ಸೀಟ್ ಕೆಳ ಭಾಗದಲ್ಲಿ ಯಾರಿಗೂ ಗೊತ್ತಾಗದ ಹಾಗೆ ಗಾಂಜಾ ಸಾಗಿಸಿ ನಗರಕ್ಕೆ ಬಂದಿದ್ದಾನೆ.
ಒಂದು ಕೆಜಿ ಗಾಂಜಾವನ್ನ 10 ಸಾವಿರ ರೂಪಾಯಿಗೆ ಖರೀದಿ ಮಾಡಿ 25 ಸಾವಿರ ರೂಪಾಯಿಗೆ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ರಾಮಮೂರ್ತಿ ನಗರ ಸುತ್ತಾಮುತ್ತ ಪ್ಲಾಸ್ಟಿಕ್ ಕವರ್ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನ ಯಶಸ್ವಿಯಾಗಿ ಬಂಧಿಸಿದ್ದಾರೆ.