ಕರೊನಾ ಹಿನ್ನೆಲೆ: ರಾಜ್ಯ ಸರ್ಕಾರದಿಂದ 1250 ಕೋಟಿ ರೂ. ಮೌಲ್ಯದ ವಿಶೇಷ ಪ್ಯಾಕೇಜ್ ಘೋಷಿಸಿದ ಸಿಎಂ ಯಡಿಯೂರಪ್ಪ! | ಜನತಾ ನ್ಯೂಸ್
ಬೆಂಗಳೂರು : ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಮೇ 24ರವರೆಗೆ ಲಾಕ್ಡೌನ್ ನಿರ್ಬಂಧ ಹೇರಿದೆ. ಬಡ ಜನರ ಜೀವನಮಟ್ಟ ಸುಧಾರಣೆಯ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ.
ಈ ಸಂಬಂಧ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಯಡಿಯೂರಪ್ಪ 1250 ಕೋಟಿ ರೂಪಾಯಿ ಮೌಲ್ಯದ ವಿಶೇಷ ಪ್ಯಾಕೇಜ್ ಘೋಷಿಸಿದ್ರು. ರೈತರಿಗೆ ಸಹಕಾರಿ ಸಂಘಗಳಿಂದ ಪಡೆದ ಸಾಲದ ಕಂತು ಪಾವತಿ ಮುಂದೂಡಿದ್ದರೇ, ಹೂ, ಹಣ್ಣು, ತರಕಾರಿ ಬೆಳೆಗಾರರಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಅನ್ನು ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಅಲ್ಲದೇ ಮೇ.24ರ ನಂತ್ರ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಸ್ತರಣೆ ಕುರಿತಂತೆ ಅಂದೇ ನಿರ್ಧಾರ ಪ್ರಕಟಿಸೋದಾಗಿ ತಿಳಿಸಿದ್ದಾರೆ.
ಆಟೋ-ಟ್ಯಾಕ್ಷಿ ಚಾಲಕರಿಗೆ "3 ಸಾವಿರ" ಸಹಾಯಧನ
ಬೀದಿಬದಿ ವ್ಯಾಪಾರಿಗಳಿಗೆ 3 ಸಾವಿರ ರೂಪಾಯಿ
ಹೂವು-ಹಣ್ಣು ವರ್ತಕರಿಗೆ 3 ಸಾವಿರ ರೂಪಾಯಿ
ಅಸಂಘಟಿತ ಕಾರ್ಮಿಕರಿಗೆ 2 ಸಾವಿರ ರೂಪಾಯಿ
ಸವಿತಾ ಸಮಾಜದವರಿಗೆ 3 ಸಾವಿರ ರೂಪಾಯಿ
ಕಟ್ಟಡ ಕಾರ್ಮಿಕರಿಗೆ ತಲಾ ಮೂರು ಸಾವಿರದಂತೆ ಕರ್ನಾಟಕ ಕಟ್ಟಡ ಕಲ್ಯಾಣ ಮಂಡಳಿಯಲ್ಲಿ ನೊಂದಣಿ ಮಾಡಿಸಿದವರಿಗೆ ನೀಡಲಾಗುತ್ತದೆ.
ಎಪಿಎಲ್ ಕಾರ್ಡ್ದಾರರಿಗೆ ಕೆಜಿಗೆ 15 ರೂಪಾಯಿಯಂತೆ ಅಕ್ಕಿ ವಿತರಣೆ
ಸಹಕಾರಿ ಸಂಘಗಳಿಂದ ಸಾಲ ಪಡೆದವರು ಕಂತು ಪಾವತಿಸುವ ಅವಧಿಯನ್ನ ಜುಲೈ 30ರವರೆಗೂ ರಾಜ್ಯ ಸರ್ಕಾರ ಮುಂದೂಡಿದೆ.
ಇಂದಿರಾ ಕ್ಯಾಂಟೀನ್ಗಳಲ್ಲಿ ಉಚಿತ ಆಹಾರ ಸಿಗಲಿದೆ.
ಕೊರೊನಾ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಂಪೂರ್ಣ ಉಚಿತವಾಗಿದೆ.
ಕಲಾ ತಂಡಗಳಿಗೆ ತಲಾ 3 ಸಾವಿರ ರೂ.ನಂತೆ 16,100 ಜನರಿಗೆ ನೀಡಲಾಗುವುದು ಇದಕ್ಕೆ 4 ಕೋಟಿ ರೂಪಾಯಿ ಖರ್ಚಾಗಲಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಮೇ.24ರ ನಂತ್ರ ಲಾಕ್ ಡೌನ್ ವಿಸ್ತರಣೆ ಬಗ್ಗೆ, ಮೇ.24ರಂದೇ ಚರ್ಚಿಸಿ, ತೀರ್ಮಾನ ಕೈಗೊಳ್ಳಲಾಗುತ್ತದೆ. ಸದ್ಯಕ್ಕೆ ಇಂದು ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು.