ಹೆಣದ ಮೇಲೆ ಹಣ ಮಾಡಬೇಡಿ, ನಿಮಗೆ ಒಳ್ಳೆಯದಾಗಲ್ಲ: ವಿಜಯೇಂದ್ರ ವಿರುದ್ಧ ವಿಶ್ವನಾಥ್ ಆಕ್ರೋಶ | ಜನತಾ ನ್ಯೂಸ್
ಮೈಸೂರು : ಹೆಣದ ಮೇಲೆ ಹಣ ಮಾಡಬೇಡಿ, ನಿಮಗೆ ಒಳ್ಳೆಯದಾಗಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿಂದು ಮಾತನಾಡಿದ ವಿಶ್ವನಾಥ್, ಸರ್ಕಾರ ಹೆಣದ ಮೇಲೆ ಹಣ ಮಾಡುವುದು ಸರಿಯಲ್ಲ. ರಾಜ್ಯ ಸರ್ಕಾರದ ಆಡಳಿತ ಕೇಂದ್ರೀಕರಣ ಆಗಿದೆ. ಇದೆಲ್ಲವೂ ಪರ್ಸಂಟೇಜ್ಗಾಗಿ ಮಾಡಿಕೊಂಡಿರುವುದು. ಮೈಸೂರು ಡಿಸಿಗೆ 10 ಪೈಸೆ ಖರ್ಚು ಮಾಡುವ ಅಧಿಕಾರವಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರಿಗೂ ಆ ಅಧಿಕಾರವಿಲ್ಲ. ಯಾವುದೇ ಬಿಲ್ ಪಾಸಾಗಲು ಬೆಂಗಳೂರಿಗೆ ಹೋಗಬೇಕು ಎಂದು ಹೇಳಿದ್ದಾರೆ.
ರಾಜ್ಯಕ್ಕೆ ಅನುಭವಿ ಐಎಎಸ್ ಅಧಿಕಾರಿಗಳು ಬೇಕಿದೆ, ಮ್ ಜಿಲ್ಲೆಗಳಿಗೆ ಐಎಎಸ್ ಕಾರ್ಯದರ್ಶಿಗಳನ್ನು ನೇಮಿಸಿ. ವಿಧಾನಸೌಧದಲ್ಲಿ ಹೆಚ್ಚುವರಿ ಕಾರ್ಯದರ್ಶಿಗಳು ಹಾಗೂ ಆಯುಕ್ತರು ಕೆಲಸ ಇಲ್ಲದೆ ಕುಳಿತಿದ್ದಾರೆ. ಅವರನ್ನು ಜಿಲ್ಲೆಗಳಿಗೆ ಜಿಲ್ಲಾಧಿಕಾರಿ ಮಾಡಿ ಕಳುಹಿಸಿ. ಪ್ರತಿಯೊಬ್ಬರಿಗೂ 100 ಕೋಟಿ ನೀಡಿ ಎಂದು ಸಲಹೆ ನೀಡಿದರು. ಮೂರು ತಿಂಗಳು ಜಿಲ್ಲೆಗೆ ಜಿಲ್ಲಾಧಿಕಾರಿಯಾಗಿ ಕಾರ್ಯದರ್ಶಿಗಳನ್ನು ನೇಮಿಸಿ. ಎಲ್ಲಾ ಅಧಿಕಾರವನ್ನು ಅವರಿಗೆ ನೀಡಿ. ಎಲ್ಲಾ ಜವಾಬ್ದಾರಿಯನ್ನು ಅವರಿಗೆ ನೀಡಿ. ಸಾವುಗಳಿಗೆ ಅವರನ್ನು ಹೊಣೆಗಾರರನ್ನಾಗಿ ಮಾಡಿ ಎಂದರು.
ಸದ್ಯ ಜಿಲ್ಲಾಧಿಕಾರಿಗೆ ಹಣ ಖರ್ಚು ಮಾಡಲು ಪವರ್ ಇಲ್ಲ. ಸರ್ಕಾರ ಹಣಕಾಸಿನ ವಿಚಾರ ಕೇಂದ್ರಿಕೃತ ಮಾಡಿದೆ. ಜಿಲ್ಲಾಧಿಕಾರಿಗಳು ನಮಗೆ ಅಧಿಕಾರ ಇಲ್ಲ ಅನ್ನೋದನ್ನು ಪ್ರಧಾನಿಗೆ ಹೇಳಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಡೀಸಿಗೆ ಮನವಿ ಮಾಡಬಾರದು, ಕಮಾಂಡ್ ಮಾಡಬೇಕು ಎಂದು ಸೂಚನೆ ನೀಡಿದರು.