Sat,Apr27,2024
ಕನ್ನಡ / English

ಬ್ಲ್ಯಾಕ್ ಫಂಗಸ್ ಪತ್ತೆ ಹಚ್ಚೋದು ಹೇಗೆ? ಏನು ಕ್ರಮ ತೆಗೆದುಕೊಳ್ಳಬೇಕು? ಚಿಕಿತ್ಸಾ ವಿಧಾನವೇನು?: ಏಮ್ಸ್ ಹೊಸ ಮಾರ್ಗಸೂಚಿಯಲ್ಲಿ ಏನಿದೆ? | ಜನತಾ ನ್ಯೂಸ್

20 May 2021
1662

ನವದೆಹಲಿ: : ದೇಶಾದ್ಯಂತ ಹಲವಾರು ಕೋವಿಡ್ ರೋಗಿಗಳ ಜೀವವನ್ನು ಬಲಿತೆಗೆದುಕೊಂಡ ಕಪ್ಪು ಶಿಲೀಂಧ್ರ ಅಥವಾ ಮ್ಯೂಕಾರ್ಮೈಕೋಸಿಸ್ ಪ್ರಕರಣಗಳನ್ನು ಪತ್ತೆ ಹಚ್ಚಲು ಮತ್ತು ಆರೈಕೆ ಮಾಡಲು ಐಐಎಂಎಸ್ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ದೆಹಲಿಯ ಪ್ರತಿಷ್ಠಿತ ವೈದ್ಯ ವಿಜ್ಞಾನ ಸಂಸ್ಥೆ ಮಾರ್ಗಸೂಚಿಯೊಂದನ್ನು ಬಿಡುಗಡೆ ಮಾಡಿದ್ದು, ಸೋಂಕನ್ನು ಹೇಗೆ ಗುರುತಿಸಬೇಕು ಹಾಗೂ ಅದಕ್ಕೆ ಏನೇನು ಕ್ರಮಗಳನ್ನು ಕೈಗೊಳ್ಳಬೇಕು ಎನ್ನುವುದನ್ನು ವಿವರಿಸಿದೆ.

1. ಏಮ್ಸ್ ನೀಡಿದ ಮಾರ್ಗಸೂಚಿಯ ಪ್ರಕಾರ ಅನಿಯಂತ್ರಿತ ಮಧುಮೇಹ ಸಮಸ್ಯೆಯನ್ನು ಹೊಂದಿರುವವರು ಈ ಸಮಸ್ಯೆಗೆ ಹೆಚ್ಚಾಗಿ ಒಳಗಾಗುತ್ತಾರೆ. ಮಧುಮೇಹ ಕೀಟೋಆಸಿಡೋಸಿಸ್, ಅಧಸ್ಟಿರಾಯ್ಡ್ ಗಳನ್ನು ಪಡೆದುಕೊಂಡಿರುವ ಮಧುಮೇಹಿಗಳು ಅಥವಾ ಟೊಸಿಲಿಜುಮಾಬ್(tocilizumab) ಚಿಕಿತ್ಸೆ ಪಡೆದ ರೋಗಿಗಳು ಬ್ಲ್ಯಾಕ್ ಫಂಗಸ್‌ಗೆ ತುತ್ತಾಗುವ ಅಪಾಯವಿದೆ ಎಂದು ಏಮ್ಸ್ ಹೇಳಿದೆ.

2. ರೋಗನಿರೋಧಕ ಔಷಧಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಪಡೆದ ರೋಗಿಗಳು ಅಥವಾ ಆಯಂಟಿ ಕ್ಯಾನ್ಸರ್ ಚಿಕಿತ್ಸೆ ಹಾಗೂ ದೀರ್ಘಕಾಲದ ಅನಾರೋಗ್ಯವನ್ನು ಹೊಂದಿದ ರೋಗಿಗಳು ಕೂಡ ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ.

3. ಕೊರೊನಾ ವೈರಸ್‌ನ ಗಂಭೀರ ಸಮಸ್ಯೆಗೆ ಒಳಗಾಗಿ ವೆಂಟಿಲೇಟರ್ ಮಾಸ್ಕ್ ಅಥವಾ ಮೂಗಿನ ಕೊಳವೆ ಮೂಲಕ ಆಮ್ಲಜನಕದ ಸಹಾಯದಲ್ಲಿದ್ದ ರೋಗಿಗಳು ಕೂಡ ಬ್ಲ್ಯಾಕ್ ಫಂಗಸ್‌ಗೆ ತುತ್ತಾಗುವ ಅಪಾಯವಿದೆ.

4. ಹೀಗೆ ಬ್ಲ್ಯಾಕ್ ಫಂಗಸ್ ಅಪಾಯವನ್ನು ಹೊಂದಿರುವ ರೋಗಿಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರವೂ ವೈದ್ಯರ ತಪಾಸಣೆಗೆ ಒಳಗಾಗುವಂತೆ ಸಲಹೆ ನೀಡಲು ಏಮ್ಸ್ ವೈದ್ಯರು ಸಲಹೆ ನೀಡಿದ್ದಾರೆ.

ಕಪ್ಪು ಶಿಲೀಂಧ್ರ ಸೋಂಕನ್ನು ಕಂಡುಹಿಡಿಯುವುದು ಹೇಗೆ?

1. ಮೂಗಿನಿಂದ ಅಸಹಜ ಕಪ್ಪು ವಿಸರ್ಜನೆ, ರಕ್ತ ಬರುವುದು

2. ಮೂಗಿನಲ್ಲಿ ಕಿರಿಕಿರಿ, ತಲೆನೋವು, ಕಣ್ಣಿನ ನೋವು, ಕಣ್ಣಿನ ಸುತ್ತ ಊತ, ಎರಡೆರಡು ದೃಷ್ಟಿ, ಕಣ್ಣು ಕೆಂಪಾಗುವುದು, ಕಾಣದಿರುವುದು, ಅಸ್ಪಷ್ಟತೆ, ಕಣ್ಣು ತೆರೆಯುವುದಕ್ಕೆ ಹಾಗೂ ಮುಚ್ಚುದಕ್ಕೆ ಕಷ್ಟವಾಗುವುದು

3. ಮುಖ ಮರಗಟ್ಟುವಿಕೆ ಅಥವಾ ಜುಮ್ಮೆನಿಸುವ ಅನುಭವ

4. ಆಹಾರ ಸೇವಿಸುವ ವೇಳೆ ನೋವು, ಬಾಯಿ ತೆರೆಯಲು ಕಷ್ಟವಾಗುವುದು

5. ಮುಖದಲ್ಲಿ ಊತ, ಕಪ್ಪುಗಟ್ಟುವಿಕೆ, ಗಟ್ಟಿಯಾಗುವಿಕೆ, ನೋವು ಕಾಣಿಸಿಕೊಳ್ಳುವುದು

6. ಹಲ್ಲು ಉದರುವುದು, ಬಾಯಿ ಒಳಗೂ ಕಪ್ಪು ಬಣ್ಣ ಹಾಗೂ ಊತ ಕಾಣಿಸಿಕೊಳ್ಳುವುದು

ಇವು ಬ್ಲ್ಯಾಕ್ ಫಂಗಸ್​ ಸೋಂಕಿನ ಕೆಲ ಪ್ರಮುಖ ಲಕ್ಷಣಗಳು

ಸೋಂಕು ಕಾಣಿಸಿಕೊಂಡಾಗ ಏನು ಮಾಡಬೇಕು?
1. ಬ್ಲ್ಯಾಕ್ ಫಂಗಸ್ ಪತ್ತೆಯಾದಾಗ ENT ವೈದ್ಯರು, ಕಣ್ಣಿನ ವೈದ್ಯರು ಅಥವಾ ಸೂಕ್ತ ತಜ್ಞರ ಬಳಿ ತೆರಳಿ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಬೇಕು

2. ರಕ್ತದಲ್ಲಿನ ಮಧುಮೇಹ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ನಿಯಮಿತವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಮತ್ತು ಸೂಕ್ತ ಕ್ರಮ ಅನುಸರಿಸಬೇಕು

3. ಇತರ ಆರೋಗ್ಯ ಸಮಸ್ಯೆಗಳಿದ್ದರೆ ಅದಕ್ಕೆ ಸೂಕ್ತ ಚಿಕಿತ್ಸೆ ಪಡೆಯುವುದನ್ನು ತಪ್ಪಿಸಬಾರದು

4. ವೈದ್ಯರನ್ನು ಕೇಳದೆ ಯಾವ ಕಾರಣಕ್ಕೂ ಸ್ಟಿರಾಯ್ಡ್ ಹಾಗೂ ಆಯಂಟಿ ವೈರಲ್ ಡ್ರಗ್ ಪಡೆಯಬಾರದು

5. ವೈದ್ಯರ ಸಲಹೆ ಮೇರೆಗೆ MRI, ಸಿಟಿ ಸ್ಕ್ಯಾನ್ ಮಾಡಿಸಬೇಕು

RELATED TOPICS:
English summary :Black fungus treatment facility

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...