ಮಮತಾ ಬ್ಯಾನರ್ಜಿ: ನಂದಿಗ್ರಾಮ್ ದ ಸೋಲಿನ ಬಳಿಕ, ಭವಾನಿಪುರದಿಂದ ಪುನಃ ಸ್ಪರ್ಧಿಸಲು ಸಿದ್ದತೆ | ಜನತಾ ನ್ಯೂಸ್
ಕೊಲ್ಕೊತ್ತಾ : ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪ್ರತಿಷ್ಠೆಯ ಸ್ವಕ್ಷೇತ್ರ ನಂದಿಗ್ರಾಮ್ ನಲ್ಲಿ ಬಿಜೆಪಿ ನಾಯಕ ಹಾಗೂ ಪ್ರಸ್ತುತ ಪ್ರತಿಪಕ್ಷದ ನಾಯಕ ಸುವೆಂದು ಅಧಿಕಾರಿ ಅವರ ವಿರುದ್ಧ ಸೋಲನ್ನೋಪ್ಪಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈಗ ಪದವಿಯನ್ನು ಉಳಿಸುಕೊಳ್ಳಲು, ಭವಾನಿಪುರ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ.
ಭವಾನಿಪುರ ಕ್ಷೇತ್ರದಿಂದ ಆಯ್ಕೆಯಾಗಿ ಗೆದ್ದು ಬಂದ 3 ವಾರಗಳೊಳಗೆ ತೃಣಮೂಲ ಕಾಂಗ್ರೆಸ್ ಶಾಸಕ ಸೋವಾಂಡೇಬ್ ಚಟ್ಟೋಪಾಧ್ಯಾಯ ಅವರು ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ತಮ್ಮ ರಾಜೀನಾಮೆ ಪತ್ರವನ್ನು ಇಂದು ಸ್ಪೀಕರ್ಗೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸ್ವಕ್ಷೇತ್ರ ನಂದಿಗ್ರಾಮ್ ದಲ್ಲಿ ತಮ್ಮ ಪ್ರತಿಸ್ಪರ್ಧಿಯಾದ ಬಿಜೆಪಿಯ ಅಭ್ಯರ್ಥಿ ಸುವೆಂದು ಅಧಿಕಾರಿ ಅವರ ಎದುರು 1956 ಮತಗಳ ಅಂತರದಿಂದ ಸೋಲನ್ನು ಒಪ್ಪಿಕೊಂಡಿದ್ದರು.