ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ವಿಸ್ತರಣೆ, ಮತ್ತೆ 14 ದಿನ ಲಾಕ್ಡೌನ್ ವಿಸ್ತರಣೆ: ಸಿಎಂ ಯಡಿಯೂರಪ್ಪ ಘೋಷಣೆ | ಜನತಾ ನ್ಯೂಸ್
ಬೆಂಗಳೂರು : ರಾಜ್ಯದಲ್ಲಿ ಮೇ.24ರಿಂದ ಮತ್ತೆ 14 ದಿನ ರಾಜ್ಯಾಧ್ಯಂತ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಸ್ತರಣೆ ಮಾಡಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ಕೋವಿಡ್ ಪರಿಸ್ಥಿತಿ ಮತ್ತು ಲಾಕ್ಡೌನ್ ವಿಸ್ತರಣೆ ಕುರಿತು ಇಂದು ಸಿಎಂ ನಿವಾಸ ಕಾವೇರಿಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಡಿಸಿಎಂ ಅಶ್ವಥ್ ನಾರಾಯಣ, ಸಚಿವ ಆರ್.ಅಶೋಕ್, ಶಾಸಕ ಎಸ್.ಆರ್.ವಿಶ್ವನಾಥ್, ಸಿಎಸ್ ರವಿಕುಮಾರ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಆರೋಗ್ಯ ಇಲಾಖೆ ಎಸಿಎಸ್ ಜಾವೇದ್ ಅಖ್ತರ್ ಭಾಗಿಯಾಗಿದ್ದರು.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಲಾಕ್ಡೌನ್ನಿಂದ ಸೋಂಕಿನ ಪ್ರಮಾಣ ಇಳಕೆಯಾಗುತ್ತಿದ್ದು, ಜನರ ಹಿತದೃಷ್ಟಿಯಿಂದ ಮತ್ತೆ ಲಾಕ್ಡೌನ್ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ, ಜನ ಸಹಕರಿಸಬೇಕು ಎಂದರು.
ಮೇ.24ರಿಂದ ನಂತ್ರ ಮತ್ತೆ 14 ದಿನ ಲಾಕ್ ಡೌನ್ ವಿಸ್ತರಣೆ ಮಾಡಲಾಗುತ್ತದೆ. ದಿನಾಂಕ 07-06-2021ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಬೆಳಿಗ್ಗೆ 6 ರಿಂದ 9.45ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಹಿಂದಿನ ಮಾರ್ಗಸೂಚಿ ಕ್ರಮಗಳನ್ನು ಮುಂದುವರೆಸಲಾಗಿದೆ. ಬೆಂಗಳೂರಿನಲ್ಲಿ ಕಠಿಣ ಲಾಕ್ ಡೌನ್ ಜಾರಿಗೆ ಸೂಚಿಸಲಾಗಿದೆ. ಇನ್ಮುಂದೆ ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದರು.
ಮುಂದಿನ ಮೇ 25 ರಿಂದ ಜೂನ್ 7ರವರೆಗೆ ಮತ್ತೆ ಹದಿನಾಲ್ಕು ದಿನಗಳ ಕಾಲ ಲಾಕ್ ಡೌನ್ ಮುಂದುವರೆಸಲು ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.