Fri,Apr26,2024
ಕನ್ನಡ / English

9 ವರ್ಷ ಪ್ರೀತಿಸಿ, ಮದುವೆಯಾಗಿ ಕೈಕೊಟ್ಟ ಪ್ರಿಯಕರ; ಯುವಕನ ಮನೆ ಎದುರು ಯುವತಿಯ ಧರಣಿ | ಜನತಾ ನ್ಯೂಸ್

22 May 2021
2132

ಕೋಲಾರ : ಪ್ರೀತಿಸಿ ಮದುವೆಯಾಗಿ ಕೈಕೊಟ್ಟ ಪ್ರಿಯಕರನ ಮನೆ ಎದುರು ಯುವತಿಯ ಏಕಾಂಗಿ ಧರಣಿ ನಡೆಸುತ್ತಿರುವ ಘಟನೆ ಕೋಲಾರ ತಾಲೂಕಿನ ಅರಾಬಿಕೊತ್ತನೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿ ಮಹೇಶ್ ಹಾಗೂ ಅದೇ ಅರಾಬಿಕೊತ್ತನೂರು ಗ್ರಾಮದ ಅಂಬಿಕಾ ಕಳೆದ 9 ವರ್ಷದಿಂದ ಪರಸ್ಪರ ಪ್ರೀತಿ-ಪ್ರೇಮವೆಂದು ಒಡಾಡಿದ್ದಾರೆ. ಅಂಬಿಕಾ ಒತ್ತಾಯಕ್ಕೆ ಕಳೆದ ಒಂದು ವಾರದ ಹಿಂದೆಯಷ್ಟೆ ಮಹೇಶ್​ ಮನೆಯಲ್ಲೆ ಮದುವೆಯಾಗಿದ್ದಾನೆ.

ಬಳಿಕ ಮನೆಗೆ ಕರೆದೊಯ್ಯುವಂತೆ ಅಂಬಿಕಾ ಕೇಳುತ್ತಿದ್ದರೂ ಸತಾಯಿಸಲು ಆರಂಭಿಸಿದ್ದಾನೆ. ಅಷ್ಟೇ ಅಲ್ಲದೆ ಪೋಷಕರು ಹೇಳಿದಂತೆ ಬೇರೊಬ್ಬ ಯುವತಿಯನ್ನ ಮದುವೆಯಾಗಲು ಮಹೇಶ್ ಮುಂದಾಗಿದ್ದಾನೆ.

ಈ ವಿಚಾರ ತಿಳಿದ ಅಂಬಿಕಾ ಕಳೆದ ಮೂರು ದಿನದಿಂದ ಮಹೇಶ್ ನಿವಾಸದ ಎದುರು‌ ಧರಣಿ ಕುಳಿತಿದ್ದಾಳೆ. ಮನೆ ಎದುರು ಅಂಬಿಕಾ ಧರಣಿ ಕೂರುವ ಮಾಹಿತಿ ತಿಳಿದಿರುವ ಮಹೇಶ್ ಗ್ರಾಮದಿಂದಲೇ ನಾಪತ್ತೆಯಾಗಿದ್ದಾನೆ.

ಇಬ್ಬರು ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, 9 ವರ್ಷಗಳ ಹಿಂದೆಯೇ ಪರಿಚಯವಾಗಿತ್ತು. ಇಬ್ಬರ ಪರಿಚಯ ಪ್ರೀತಿಗೆ ತಿರುಗಿತ್ತು. ಇಷ್ಟ ಪಟ್ಟಿದ್ದರಿಂದಲೇ ಲೈಂಗಿಕವಾಗಿ ಬಳಸಿಕೊಂಡು ಮಹೇಶ್ ನನಗೆ ಮೋಸ ಮಾಡುತ್ತಿದ್ದಾನೆಂದು ನೊಂದ ಅಂಬಿಕಾ ಆರೋಪಿಸಿದ್ದಾರೆ.

ಪ್ರೀತಿಸಿ ವಂಚನೆ ಮಾಡಲು ಹೊರಟಿರುವ ಮಹೇಶ್ ವಿರುದ್ದ ಈಗಾಗಲೇ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿರುವ ಅಂಬಿಕಾ, ಜೊತೆಗೆ ಫೋಟೋಗಳನ್ನ ಪೊಲೀಸರಿಗೆ ದಾಖಲೆಯಾಗಿ ನೀಡಿದ್ದೇನೆ ಎಂದಿದ್ದಾಳೆ, ನ್ಯಾಯ ದೊರಕಿಸಿ ಕೊಡುವಂತೆ ಆಗ್ರಹಿಸಿದ್ದಾರೆ. ಮಹಿಳಾ ಸಾಂತ್ವಾನ ಕೇಂದ್ರಕ್ಕೂ ದೂರು ನೀಡಿದ್ದು, ಮಹೇಶ್ ಜೊತೆಗೆ ಜೀವನ ನಡೆಸಲು ಅವಕಾಶ ನೀಡುವಂತೆಯೂ ಮನವಿಯನ್ನು ಅಂಬಿಕಾ ಸಲ್ಲಿಸಿದ್ದಾರೆ.

ಯುವತಿಯನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಮಹೇಶ್ ಪೋಷಕರು, ಮಹೇಶ್ ಜೊತೆಗೆ ಸಲುಗೆಯಿಂದ ಇದ್ದದ್ದು ನಿನ್ನದೆ ತಪ್ಪು, ಪೊಲೀಸ್ ಠಾಣೆಗೆ ದೂರು ನೀಡಿ, ಯಾವ ಕಾರಣಕ್ಕೆ ಪ್ರತಿಭಟನೆ ಮಾಡಲು ಬಂದಿದ್ದೀಯಾ? ನ್ಯಾಯಾಲಯದಲ್ಲೇ ಪ್ರಕರಣ ಇತ್ಯರ್ಥ ಮಾಡಿಕೋ ಎನ್ನುತ್ತಾ ಸ್ಥಳದಿಂದ ಹೋಗುವಂತೆ ಒತ್ತಡ ಹಾಕುತ್ತಿದ್ದಾರೆ ಎಂದಿದ್ದಾಳೆ.

RELATED TOPICS:
English summary :Kolar

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...