ಆಮ್ಲಜನಕ ಸಿಲಿಂಡರ್ ಅಕ್ರಮ ದಾಸ್ತಾನು: ಇಬ್ಬರ ಬಂಧನ | ಜನತಾ ನ್ಯೂಸ್
ಬೆಂಗಳೂರು : ಅಕ್ರಮವಾಗಿ ಆಮ್ಲಜನಕ ಸಿಲಿಂಡರ್ಗಳನ್ನು ದಾಸ್ತಾನು ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಶಿವಗಣೇಶ್ ಹಾಗೂ ಭರತ್ ಬಂಧಿತ ಆರೋಪಿಗಳು. ಇವರಿಬ್ಬರೂ ಬ್ಯಾಟರಾಯನಪುರ ಹಾಗೂ ಶೇಷಾದ್ರಿಪುರಂನಲ್ಲಿ ಹೆಚ್ಚಿನ ಹಣ ಪಡೆದು ಬ್ಲಾಕ್ ನಲ್ಲಿ ಆಕ್ಸಿಜನ್ ಸಿಲಿಂಡರ್ ನೀಡ್ತಿದ್ದರು ಎನ್ನಲಾಗಿದೆ.
ಬಂಧಿತರಿಂದ 4 ಆಮ್ಲಜನಕ ಸಿಲಿಂಡರ್ ವಶಕ್ಕೆ ಪಡೆಯಲಾಗಿದೆ. ಶೇಷಾದ್ರಿಪುರ ಮತ್ತು ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
English summary :Bangalore